ಕಾಂಗ್ರೆಸ್‌ನ ಮಾಜಿ ಶಾಸಕಿಗೆ ಬಿಜೆಪಿ ಶಾಸಕ ಸವಾಲು

ಕಾಂಗ್ರೆಸ್‌ನ ಮಾಜಿ ಶಾಸಕಿಗೆ ಬಿಜೆಪಿ ಶಾಸಕ ಸವಾಲು

ಬಾಗಲಕೋಟೆ : ನಮ್ಮ ರಾಜ್ಯಕ್ಕಿಂತ ನಾಲ್ಕು ಪಟ್ಟು ಮಹಾರಾಷ್ಟ್ರದಲ್ಲಿ ಹೆಚ್ಚುಯಾಗುತ್ತಿದೆ. ಆ ಬಗ್ಗೆ ಮಾತನಾಡದೆ ನಮ್ಮ ರಾಜ್ಯದ ಬಗ್ಗೆ ಮಾತಾಡುತ್ತೀರಿ, ತಾಕತ್ ಇದ್ರೆ ಮಹಾರಾಷ್ಟ್ರದ ಬಗ್ಗೆ ಮಾತಾಡಿ ಎಂದು ತೇರದಾಳ ಶಾಸಕ ಸಿದ್ದು ಸವದಿ, ಕಾಂಗ್ರೆಸ್‌ನ ಮಾಜಿ ಶಾಸಕಿ ಉಮಾಶ್ರೀಗೆ ಸವಾಲು ಹಾಕಿದ್ದಾರೆ.

ಈ ವೇಳೆ ನಗರದಲ್ಲಿ ಮಾತನಾಡಿ, ಅನೇಕ ಜನರು ಕೋವಿಡ್‌ನಿಂದ ಸಾಯುತ್ತಿದ್ದಾರೆ. ಆದರೆ ಕಾಂಗ್ರೆಸ್‌ನವರು ಸಾವಿನ ಹಿನ್ನೆಲೆಯಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಕೋವಿಡ್ ನಮಗಷ್ಟೇ ಬಂದಿಲ್ಲ ಇಡೀ ಜಗತ್ತಿಗೆ ಬಂದಿದೆ ಎಂದರು.

ಡಿ.ಕೆ. ಶಿವಕುಮಾರ್ ನಿನ್ನೆ ಹೇಳ್ತಾನೆ, ಇದೇ ಸರ್ಕಾರ ಕೋವಿಡ್ ತಂದಿದೆ ಅಂತಾ. ಇವರಿಗೆ ಮಾನ ಮರ್ಯಾದೆ ಇಲ್ವಾ? ಇವರು ಸಿಎಂ ಕ್ಯಾಂಡಿಡೇಟ್ ಮಾತಾಡೋಕು ಒಂದು ನಾಲಿಗೆ ಇದೆ ಎಂದು ಕಿಡಿಕಾರಿದರು.

ನಮ್ಮ ಮೇಡಮ್ ಬೆಂಗಳೂರಲ್ಲಿ ಕೂತು ವಿಡಿಯೋ ಮಾಡಿ ಕಳಿಸ್ತಾರೆ. ಅಲ್ಲಿ ಮೂಲೆಯೊಳಗೆ ಕೂತು ವಿಡಿಯೋ ಮಾಡಬೇಡಿ. ಬನ್ನಿ ನಾವು- ನೀವು ಕ್ಷೇತ್ರಕ್ಕೆ, ಹಳ್ಳಿ ಹಳ್ಳಿಗೆ ಹೋಗೋಣ ಎಂದು ಉಮಾಶ್ರೀ ವಿರುದ್ಧ ಸಿದ್ದು ಸವದಿ ಹರಿಹಾಯ್ದರು.

Related