ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಜಿ ಎಸ್ ಟಿ ಯ ಸಚಿವರ ಗ್ರೂಪ್ ನ ಸಭೆ ಇಂದು ನವದೆಹಲಿಯಲ್ಲಿ ನಡೆಯಿತು. ನವದೆಹಲಿಯ ಕರ್ನಾಟಕ ಭವನದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಸಭೆ ನಡೆಸಿದರು.
ಸಭೆಯಲ್ಲಿ ವಿವಿಧ ರಾಜ್ಯಗಳ ಸಚಿವರು, ರಾಜ್ಯದ ಹಣಕಾಸು ಇಲಾಖೆ ಎಸಿಎಸ್ ಐಎನ್ಎಸ್ ಪ್ರಸಾದ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ. ಶಿಖಾ ಸೇರಿದಂತೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.