ಭಾರತದ ಆರ್ಥಿಕ ಪ್ರಗತಿ ಜೊತೆಗೆ ಕ್ಷೇತ್ರದ ಅಭಿವೃದ್ಥಿಯೇ ಬಿಜೆಪಿಯ ಸಂಕಲ್ಪ: ಪ್ರಲ್ಹಾದ್‌ ಜೋಶಿ

ಭಾರತದ ಆರ್ಥಿಕ ಪ್ರಗತಿ ಜೊತೆಗೆ ಕ್ಷೇತ್ರದ ಅಭಿವೃದ್ಥಿಯೇ ಬಿಜೆಪಿಯ ಸಂಕಲ್ಪ: ಪ್ರಲ್ಹಾದ್‌ ಜೋಶಿ

ಧಾರವಾಡ: ನವಭಾರತ ನಿರ್ಮಾಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ರಮಿಸುತ್ತಿದ್ದಾರೆ ಎಂದು ಪ್ರಯೋಜೋಷಿ ಅವರು ಹೇಳಿದ್ದಾರೆ.

ನಗರದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆ ಮಾಡಿ ಮಾತನಾಡಿದರು. ಭಾರತದ ಆರ್ಥಿಕ ಪ್ರಗತಿ ಜೊತೆಗೆ ಕ್ಷೇತ್ರದ ಅಭಿವೃದ್ಥಿಯೇ ಬಿಜೆಪಿಯ ಸಂಕಲ್ಪ.

ಭಾರತದಲ್ಲಿರುವ ಜನರ ಬಡತನ ದೂರು ಮಾಡುವ ಸಂಕಲ್ಪ ಪ್ರಧಾನಿ ನರೇಂದ್ರ ಮೋದಿಯವರದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದರು.

ದೇಶದ ಸಾರ್ವಜನಿಕರಿಗೆ ಉಪಯುಕ್ತವಾಗುವ ಅನೇಕ ಯೋಜನೆಗಳು ಪ್ರಧಾನಿ ನರೇಂದ್ರ ಮೋದಿಯವರು ನೀಡುತ್ತಿರುವುದು ದೇಶದ ಆರ್ಥಿಕತೆಯನ್ನು ವೃದ್ಧಿಸುವುದರ ಜೊತೆಗೆ ದೇಶದ ಜನರ ಬಡತನ ದೂರು ಮಾಡುವ ನಿಟ್ಟಿನಲ್ಲಿ ಅನೇಕ ಉದೋಗಗಳ ಸೃಷ್ಟಿ ಮಾಡಲಾಗುತ್ತಿದೆ ಎಂದರು.

ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಬಡವರಿಗೆ ಮನೆ, ಉಜ್ವಲಾ ಯೋಜನೆಗಳು ಜಾರಿಯಲ್ಲಿದ್ದು ಪ್ರಯೋಜನೆ ಪಡೆಯಬೇಕು ಎಂದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇರುವ 2024ರ ಕ್ಯಾಲೆಂಡರ್‌ ಬಿಡುಗಡೆ ಮಾಡಲಾಯಿತು. ಪಾಲಿಕೆ ಸದಸ್ಯ ಶಿವು ಹಿರೇಮಠ, ರಾಜಣ್ಣ ಕೊರವಿ, ಶಕುಂತಲಾ ಕೊಟಬಾಗಿ, ಶಂಕರ ಮುಗದ, ಬಸವರಾಜ ಗರಗ, ಮೋಹನ ರಾಮದುರ್ಗ, ಸುರೇಶ್ ಬೆದರೆ ಮತ್ತಿತರರು ಇದ್ದರು.

 

Related