ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ ಬೊಮ್ಮಾಯಿ

ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ ಬೊಮ್ಮಾಯಿ

ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹೀನಾಯವಾಗಿ ಸೋಲನ್ನು ಕಂಡಿದ್ದು ಬಿಜೆಪಿ ಪಕ್ಷಕ್ಕೆ ಅತಿ ದೊಡ್ಡ ಪೆಟ್ಟು ಬಿದ್ದಂತಾಗಿದೆ.

ಇನ್ನು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಕೆ ಸುಧಾಕರ್ ಅವರು ಹೀನಾಯವಾಗಿ ಸೋಲನ್ನು ಕಂಡಿದ್ದಾರೆ.

ಹೌದು, ರಾಜ್ಯ ರಾಜಕಾರಣದಲ್ಲಿ ಅಪರಚಿತನಾಗಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಅವರಿಂದ ಸುಮಾರು 10,000 ಕ್ಕಿಂತ ಅಧಿಕ ಮತಗಳಿಂದ ಸೋತ ಮಾಜಿ ಸಚಿವ ಡಾ ಕೆ ಸುಧಾಕರ್ ಅವರ ಮನೆಗೆ ಇಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. ಬೊಮ್ಮಾಯಿ ಸರ್ಕಾರದಲ್ಲಿ ಹೆವಿವೇಟ್ ಅನಿಸಿಕೊಂಡಿದ್ದ ಮತ್ತು ಮುಖ್ಯಮಂತ್ರಿಗಳ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಸುಧಾಕರ್ ಸೋಲಿನ ಆಘಾತದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅವರ ಬೆಂಗಳೂರು ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಬೊಮ್ಮಾಯಿ, ಸುಧಾಕರ್ ಅವರಲ್ಲಿ ಧೈರ್ಯ ತುಂಬಲು ಬಂದಿದ್ದೆ, ಸೋಮಣ್ಣ ಅವರ ಮನೆಗೂ ಹೋಗುತ್ತಿರುವೆ, ಇವರೆಲ್ಲ ನಮ್ಮ ಜೊತೆ ಶ್ರಮವಹಿಸಿ ಕೆಲಸ ಮಾಡಿದ್ದರು ಎಂದರು.

Related