ಹುಬ್ಬಳ್ಳಿ, ಶಿಗ್ಗಾಂವ, ಸವಣೂರಿಗೆ ಬೊಮ್ಮಾಯಿ ಪ್ರವಾಸ..

ಹುಬ್ಬಳ್ಳಿ, ಶಿಗ್ಗಾಂವ, ಸವಣೂರಿಗೆ ಬೊಮ್ಮಾಯಿ ಪ್ರವಾಸ..

ಬೆಂಗಳೂರು ಜು 16 : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮಗಳ ಉದ್ಘಾಟನೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ, ಶಿಗ್ಗಾಂವ ಮತ್ತು ಸವಣೂರಿಗೆ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ ಬೆಂಗಳೂರಿನಿಂದ  ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿದ ಸಿಎಂ ಬೊಮ್ಮಾಯಿ,  ಹುಬ್ಬಳ್ಳಿಯ ಮೆಟೀರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನ ಪರೀಕ್ಷಣಾ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಲಿದ್ದಾರೆ.

ಕರ್ನಾಟಕ ವಾಣಿಜ್ಯೋದ್ಯಮ ಸಂಘದಿಂದ ಆಯೋಜಿಸಿರುವ ರಾಜ್ಯ ಮಟ್ಟದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಸಂಸ್ಥೆಗಳ ಸಮ್ಮೇಳನ ಉದ್ಘಾಟನೆ ಮಾಡಿ ಬಳಿಕ, ಮಧ್ಯಾಹ್ನಧಾರವಾಡ ಜಿಲ್ಲೆಯ  ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಹಾವೇರಿ ಜಿಲ್ಲೆಯ ಶಿಗ್ಗಾವಿ ಗೆ ಪ್ರಯಾಣಿಸಲಿದ್ದಾರೆ.

ಶಿಗ್ಗಾಂವ ತಾಲ್ಲೂಕಿನ ಖರ್ಷಾಪುರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಆಯೋಜಿಸಿರುವ ಎನ್.ಹೆಚ್.4 ಕಲ್ಯಾಣ ರಸ್ತೆ ಅಗಲೀಕರಣ ಹಾಗೂ ಸುಧಾರಣಾ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ ಆಯೋಜಿಸಿರುವ ಟೆಕ್ಸ್‌ಟೈಲ್ ಪಾರ್ಕ್ ನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸಿ, ಟೆಕ್ಸ್ ಪೋರ್ಟ್ ಸಿದ್ಧ ಉಡುಪು ಘಟಕದ ನಿರ್ಮಾಣ.

ಸಂಜೆ ಶಿಗ್ಗಾಂವಿಯಿಂದ ರಸ್ತೆ ಮೂಲಕ ಹುಬ್ಬಳ್ಳಿ ಗೆ ಪ್ರಯಾಣಿಸಿ, 6.30 ಕ್ಕೆ ಹುಬ್ಬಳ್ಳಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Related