1 ವರ್ಷದ ಸಾಧನೆಯಲ್ಲಿ ಪುಸ್ತಕ ಬಿಡುಗಡೆ

1 ವರ್ಷದ ಸಾಧನೆಯಲ್ಲಿ ಪುಸ್ತಕ ಬಿಡುಗಡೆ

ಬೀದರ : ಜಿಲ್ಲೆಯಲ್ಲಿ ನಗರ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಇಂದು ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಸವಿನೆನಪಿಗಾಗಿ ಆಯೋಜಿಸಿದ.

ವರ್ಚುವಲ್ ಕಾರ್ಯಕ್ರಮದಲ್ಲಿ ರಾಜ್ಯದ ಪಶು ಸಂಗೋಪನೆ, ಹಜ್ ಹಾಗೂ ವಕ್ಫ್ ಇಲಾಖೆ ಮಂತ್ರಿಗಳು ಮತ್ತು ಬೀದರ್ ಹಾಗೂ ಯಾದಗಿರಿ ಉಸ್ತುವಾರಿ ಮಂತ್ರಿ ಪ್ರಭು ಚವ್ಹಾಣ ಅವರು ರಾಜ್ಯ ಸರ್ಕಾರದ ಒಂದು ವರ್ಷದ ಸಾಧನೆಯ ಪುಸ್ತಕ, ವಾರ್ತಾ ಇಲಾಖೆಯ ಜನಪದ ಸೇರಿದಂತೆ ಮೂರು ಪುಸ್ತಕಗಳನ್ನು ಬಿಡುಗಡೆ ಮಾಡಿದರು.

ವಿಧಾನ ಪರಿಷತ್ ಸದಸ್ಯ ರಘುನಾಥರಾವ್ ಮಲ್ಕಾಪುರೆ, ಜಿಲ್ಲಾಧಿಕಾರಿ ರಾಮಚಂದ್ರನ್.ಆರ್, ಜಿ.ಪಂ ಸಿ.ಇ.ಒ ಜ್ನಾನೇಂದ್ರಕುಮಾರ್ ಗಂಗವಾರ್, ಎಸ್.ಪಿ ಡಿ.ಎಲ್ ನಾಗೇಶ, ಹೆಚ್ಚುವರಿ ಡಿ.ಸಿ ರುದ್ರೇಶ ಘಾಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಗವಿಸಿದ್ದಪ್ಪ ಹೊಸಮನಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಫಲಾನುಭವಿಗಳು, ಮಾಧ್ಯಮದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related