ಲಂಚ ಭಾಗ್ಯ ನಿಮ್ಮ ಮುಂದಿನ ಹೆಜ್ಜೆ, ಕಾಂಗ್ರೆಸ್ರ ವಿರುದ್ಧ ವಿಜಯೇಂದ್ರ ಕಿಡಿ

ಲಂಚ ಭಾಗ್ಯ ನಿಮ್ಮ ಮುಂದಿನ ಹೆಜ್ಜೆ, ಕಾಂಗ್ರೆಸ್ರ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಕಳೆದ ವಾರ ನಗರದಲ್ಲಿ ಐಟಿ ದಾಳಿ ಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿಗರು ಆರೋಪದ ಮೇಲೆ ಆರೋಪಗಳನ್ನು ಮಾಡುತ್ತಿದ್ದಾರೆ.

ಇನ್ನು ಐಟಿ ದಾಳಿ ವಿರುದ್ಧ ಪ್ರತಿಕ್ರಿಯೆ ನೀಡಿದ ಶಾಸಕ ವಿಜಯೇಂದ್ರ ಅವರು, ರಾಜ್ಯದಲ್ಲಿ ಸದ್ಯದ ಬೆಳವಣಿಗೆಗಳನ್ನು ನೋಡಿದರೆ ಲಂಚ ಭಾಗ್ಯ ನಿಮ್ಮ ಮುಂದಿನ ಹೆಜ್ಜೆ ಪರ್ಸೆಂಟೇಜ್ ನಿಗದಿ ನಿಮ್ಮ ಮುಂದಿನ ಗುರಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ  ಕಿಡಿಕಾರಿದ್ದಾರೆ.

ಈ ಕುರಿತಾಗಿ ‘ಎಕ್ಷ್‌’ ತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ಕಪ್ಪು ಹಣದ ಖಜಾನೆ ಇರುವಲ್ಲಿ ದಾಳಿ ನಡೆಸದೇ ಬಡವರ ಮನೆ ಶೋಧಿಸಲಾದೀತೆ? ಕಲಾವಿದರ ಸಂಭಾವನೆಯಿಂದಲೂ ಕಮಿಷನ್ ವಸೂಲಿ ದಂಧೆಗಿಳಿದಿರುವ ನಿಮ್ಮ ಸರ್ಕಾರದ ಆಡಳಿತದ ಹೀನಾಯ ಭ್ರಷ್ಟ ಮುಖ ಜನರ ಮುಂದೆ ತೆರೆದು ಕೊಂಡಿದೆ. ಸದ್ಯದ ಬೆಳವಣಿಗೆಗಳನ್ನು ಗಮನಿಸಿದರೆ ‘ಲಂಚ ಭಾಗ್ಯ’ಯೋಜನೆ ನಿಮ್ಮ ಮುಂದಿನ ಹೆಜ್ಜೆ ‘ಪರ್ಸೆಂಟೇಜ್ ‘ನಿಗದಿ ನಿಮ್ಮ ಮುಂದಿನ ಗುರಿ ಎಂಬುದು ಖಾತ್ರಿಯಾಗುತ್ತಿದೆ ಎಂದಿದ್ದಾರೆ.

 

Related