ಸರ್ಕಾರ ದಿವಾಳಿಯಾಗಿದೆ ಮಾಜಿ ಸಿಎಂ

ಸರ್ಕಾರ ದಿವಾಳಿಯಾಗಿದೆ ಮಾಜಿ ಸಿಎಂ

ಬೆಂಗಳೂರು: ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿ ಜಾರಿಗೆ ಹಣವಿಲ್ಲ. ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ ಎದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಾಗ್ದಾಳಿ ಮಾಡಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಇದ್ದಾಗ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ಸಿಗರು ಕಾಲಹರಣ ಮಾಡುತ್ತಿದ್ದಾರೆ. ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ, ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

 

Related