ವಿಜಯಪುರ : ಮುಖ್ಯಮಂತ್ರಿ ಬದಲಾವಣೆ ಎಂಬುದು ಗಾಳಿ ಸುದ್ದಿ, ಮಾಧ್ಯಮಗಳ ಸೃಷ್ಟಿ. ಬಿ.ಎಸ್ ಯಡಿಯೂರಪ್ಪ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಗಾಗಿ ಹೈಕಮಾಂಡ್ ನಿರ್ದೇಶನಕಕ್ಕಾಗಿ ಕಾಯುತ್ತಿದ್ದೇವೆ. ಶೀಘ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದರು.
ಬೇರೆ ಪಕ್ಷಗಳನ್ನು ತೊರೆದು ಬಿಜೆಪಿಗೆ ಬಂದಿರುವ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು. ಖಂಡಿತಾ ಸಿಗಲಿದೆ ಎಂದರು.
ಲಿಂಗಾಯತರನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆಗೂಳಿಸುವ ಮುನ್ನ ಕಾನೂನು ಮತ್ತು ಸಂವಿಧಾನಾತ್ಮಕ ಚೌಕಟ್ಟಿನಲ್ಲಿ ಚರ್ಚಿಸಿ, ಅಡ್ವಕೇಟ್ ಜನರಲ್ ಅಭಿಪ್ರಾಯ ಪಡೆದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.