ಬಿಟಿಎಂ ಕ್ಷೇತ್ರ ಬಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬಿಟಿಎಂ ಕ್ಷೇತ್ರ ಬಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯದ ರಾಜಕಾರಣದಲ್ಲಿ ಚುನಾವಣೆ ಕಣ ರಂಗೆರಿದ್ದು, ಇಂದು ಬಿಟಿಎಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಕೆ. ಎಸ್. ಶ್ರೀಧರೆಡ್ಡಿ ಅವರು ನಾಮಪತ್ರ ಸಲ್ಲಿಕೆ ಮಾಡಿದರು.

ಈ ಬಾರಿ ಬಿಟಿಎಂ ವಿಧಾನಸಭಾ ಕ್ಷೇತ್ರದಲ್ಲಿ ಬದಲಾವಣೆ ತರಲು ಕಾರ್ಯಕರ್ತರು ನಿರ್ಧರಿಸಿದ್ದಾರೆ ಈ ಚುನಾವಣೆ ತುಂಬಾ ಮಹತ್ವದ ಚುನಾವಣೆ ಎಂದು‌ ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಇದು ಬಿಟಿಎಂ‌ ಲೇಔಟಿನ ಜನರ ಭವಿಷ್ಯಕ್ಕಾಗಿ, ರಾಜ್ಯದ ಭವಿಷ್ಯಕ್ಕಾಗಿ ತುಂಬಾ ಮಹತ್ವದ ಚುನಾವಣೆ, ಶ್ರೀಧರ್ ರೆಡ್ಡಿ ಬೆಂಬಲಕ್ಕೆ ನಾನು ಬಂದಿದ್ದೇನೆ ಭ್ರಷ್ಟಾಚಾರಕ್ಕೆ ಹೆಸರಾದ ಕಾಂಗ್ರೆಸ್ ಧಿಕ್ಕರಿಸಿ ಈ ಬಾರಿ ಕಮಲಕ್ಕೆ ಮತ ನೀಡಿ ಎಲ್ಲಾ ಮತದಾರರು ಬಿಜೆಪಿಗೆ ಮತ ನೀಡಿ ಅನ್ನೋದು ನನ್ನ ಮನವಿ.

ರಾಮಲಿಂಗಾರೆಡ್ಡಿ ಅವರ ಕುಟುಂಬದ ರಾಜಕೀಯ ಈ ಬಾರಿ ನಡೆಯಲ್ಲ ಮೋದಿ ನವ ಭಾರತ ನಿರ್ಮಾಣದ ಕನಸು ಕಟ್ಟಿದ್ರು ಹೀಗಾಗಿ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ 150 ಸೀಟ್ ಬರುತ್ತೆ ಅನ್ನೋದು ರಾಮಲಿಂಗಾರೆಡ್ಡಿ ಅವರ ಕನಸು. ಈ ಬಾರಿ ಬಿಜೆಪಿ 135 ರಿಂದ 150 ಸೀಟ್ ಬಜೆಪಿ ಗೆಲ್ಲಲಿದೆ ಜನ ಕಾಂಗ್ರೆಸ್ ಜೆಡಿಎಸ್ ಸರ್ಕಾರದಿಂದ ಸಾಕಷ್ಟು ಅನುಭವಿಸಿದ್ದಾರೆ  ಮತ್ತೆ ಡಬಲ್ ಇಂಜಿನ್ ಸರ್ಕಾರ ಬರಲಿದೆ ಎಂದು ಶ್ರೀಧರ್ ರೆಡ್ಡಿ ಅವರ ನಾಮಿನೇಷನ್  ಸಲ್ಲಿಸುವ ವೇಳೆ ನುಡಿದರು.

ಇನು ಈ ಸಂದರ್ಭದಲ್ಲಿ ಕೇಂದ್ರದ ಸಚಿವರಾದ ರಾಜೀವ್ ಚಂದ್ರಶೇಖರ್, ಬಿಜೆಪಿ ಮುಖಂಡರಾದ ಜೈದೇವ್, ಅನಿಲ್ ಶೆಟ್ಟಿ, ರಮೇಶ್ ರೆಡ್ಡಿ ಅವರು ಶ್ರೀಧರೆಡ್ಡಿ ಅವರಿಗೆ ಸಾತ್ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಎಂಎಲ್ಸಿ ಗೋಪಿನಾಥ ರೆಡ್ಡಿ ಮಾಜಿ ಮೇಯರ್ ನಟರಾಜ್ ಇನ್ನಿತರರು ಬಿಜೆಪಿ ಮುಖಂಡರು ಹಾಜರಿದ್ದರು ಹಾಗೂ ಸಾವಿರಾರು ಬಿಜೆಪಿ ಕಾರ್ಯಕರ್ತರು ರ್ಯಾಲಿ ಮಾಡುವ ಮುಖಾಂತರ ಪಾಲ್ಗೊಂಡಿದ್ದರು.

 

 

Related