ಬೆಂಗಳೂರು: ಇಂದು ಕರ್ನಾಟಕ ರಾಜ್ಯದ ಬಜೆಟ್ ಮಂಡನೆಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡನೆ ಮಂಡಿಸುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 15ನೆಯ ಬಜೆಟ್ ಮಂಡನೆ ಇದಾಗಿದ್ದು, ರಾಜ್ಯದ ಜನತೆಗೆ ಯಾವೆಲ್ಲ ಯೋಜನೆಗಳಿಗೆ ಎಷ್ಟೆಷ್ಟು ಹಣ ಮಂಡನೆ ಮಾಡುತ್ತಾರೆ ಎಂದು ಸಾರ್ವಜನಿಕರು ಕಾಯುತ್ತಿದ್ದಾರೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಫೆಬ್ರವರಿ 16, ಶುಕ್ರವಾರ) ಕರ್ನಾಟಕದ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದೆ. ಸಿದ್ದರಾಮಯ್ಯ ಅವರ ಈ ಬಜೆಟ್ ಹಲವು ನಿರೀಕ್ಷೆಗಳನ್ನು ಮೂಡಿಸಿದೆ. ಏಳನೇ ವೇತನ ಆಯೋಗದ ವರದಿಯಲ್ಲಿನ ಕೆಲ ಅಂಶಗಳನ್ನು ಘೋಷಿಸುವ ಸಾಧ್ಯತೆ ಇದೆ.
ಇನ್ನು ಈ ಬಜೆಟ್ ಮಂಡಳಿಯಲ್ಲಿ ಬೆಂಗಳೂರಿನಲ್ಲಿ ಇರುವಂತಹ ಸಮಸ್ಯೆಗಳಾದ ಟ್ರಾಫಿಕ್ ಸಮಸ್ಯೆ ಮತ್ತು ರೋಡಿನ ಸಮಸ್ಯೆಗೆ ಬಹಳ ಹೊತ್ತು ನೀಡಲಾಗಿದೆ ಎಂದು ತಿಳಿದುಬಂದಿದೆ ಇದಲ್ಲದೆ ಈ ಬಾರಿ ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ಕಾಗಿ ಹಣ ಮೀಸಲಾತಿ ಇಡುವುದಾಗಿ ತಿಳಿದುಬಂದಿದೆ.