ಸ್ಥಗಿತ ಕಾಮಗಾರಿ ಮುಗಿಸುವಂತೆ ಸಚಿವ ತಾಕೀತು

ಸ್ಥಗಿತ ಕಾಮಗಾರಿ ಮುಗಿಸುವಂತೆ ಸಚಿವ ತಾಕೀತು

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮಳಿಗೆ ನಿರ್ಮಾಣ ಕಾಮಗಾರಿಗಳನ್ನು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ, ದೇವಸ್ಥಾನದ ಎದುರು ಅವೈಜ್ಞಾನಿಕವಾಗಿ ಮಳಿಗೆಗಳನ್ನು ಕಟ್ಟಲಾಗಿತ್ತು. ಈ ಹಿನ್ನೆಲೆ ಅವುಗಳನ್ನು ಸ್ಥಳಾಂತರಿಸಲಾಗಿದ್ದು, 198 ಮಳಿಗೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಇದರಲ್ಲಿಯೇ ಶೌಚಾಲಯ ಹಾಗೂ ಇತರ ಸೌಲಭ್ಯಗಳನ್ನೂ ನೋಡಿಕೊಳ್ಳಲಾಗುತ್ತದೆ. ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡ ಕಾರಣ ತ್ವರಿತವಾಗಿ ಮುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದ್ದಾರೆ.

ಅಲ್ಲದೆ, ಸ್ವತಃ ಸಚಿವರೇ ಕಾಮಗಾರಿಯನ್ನು ಪರಿಶೀಲಿಸಿದ್ದು, ಬಾಕಿ ಇರುವ 4.5 ಕೋಟಿ ರೂ ಮಂಜೂರು ಮಾಡಿಸಿಕೊಡುವಂತೆ ಸಚಿವರಿಗೆ ಮನವಿ ಮಾಡಿದ್ದು, ಅವರೂ ತಕ್ಷಣ ಬಿಡುಗಡೆ ಮಾಡಿಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಸೇರಿದಂತೆ ಅಧಿಕಾರಿಗಳು ಇದ್ದರು.

Related