ಬಸ್ ನಿಲ್ದಾಣ, ಸುತ್ತ ನಿಷೇಧಾಜ್ಞೆ

ಬಸ್ ನಿಲ್ದಾಣ, ಸುತ್ತ ನಿಷೇಧಾಜ್ಞೆ

ಕಲಬುರ್ಗಿ : ಅನಿರ್ದಿಷ್ಟ ಅವಧಿಯವರೆಗೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವಿ.ವಿ ಜ್ಯೋತ್ಸ್ನಾ ಅವರು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳ ಬಸ್ ನಿಲ್ದಾಣ ಹಾಗೂ ಡಿಪೊಗಳ ಸುತ್ತ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಜಿಲ್ಲೆಯ ಆಳಂದ, ಸೇಡಂ, ಚಿತ್ತಾಪುರ, ಕಾಳಗಿ, ಅಫಜಲಪುರ, ಚಿಂಚೋಳಿ, ಜೇವರ್ಗಿ ನಿಲ್ದಾಣಗಳ ಸುತ್ತಮುತ್ತ ಯಾರೂ ಗುಂಪುಗೂಡಬಾರದು ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಎಸ್ಪಿ ಡಾ. ಸಿಮಿ ಮರಿಯಮ್ ಜಾರ್ಜ್ ಅವರು ನಿಲ್ದಾಣ, ಡಿಪೊಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿದ್ದರು.

Related