ರಾಮನಗರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಹೈ ವೋಲ್ಟೇಜ್ ಕ್ಷೇತ್ರವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯೇ ಗೆಲ್ಲುವುದು ಎಂದು ಜೆಡಿಎಸ್ ನ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಕೆ ಬ್ರದರ್ಸ್ ಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ. ಸೋಲಿನ ಭಯದಲ್ಲಿ ಈ ಬಾರಿಯೂ ಕೂಡ ಲೋಕಸಭಾ ಚುನಾವಣೆಯಲ್ಲಿ ಸೀರೆ, ಕುಕ್ಕರು ಇನ್ನಿತರ ಗಿಫ್ಟ್ ಗಳನ್ನು ಕೊಡುತ್ತಾರೆ. ಹಾಗಾಗಿ ನಾನು ರಾತ್ರಿ 2 ಗಂಟೆಯಿಂದ 4 ಗಂಟೆಯವರೆಗೆ ಆ ಎರಡು ತಾಸು ನಿದ್ದೆ ಮಾಡುವುದಿಲ್ಲವೆಂದು ಹೇಳಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಒಂದಷ್ಟು ಜನ ಹೋಗುವುದು, ಮತ್ತೊಂದಷ್ಟು ಜನ ಬರುತ್ತಾರೆ. ಅದಕ್ಕೆ ಪ್ರಾಮುಖ್ಯತೆ ಕೊಡುವುದ ಬೇಡ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗಳು ಸಾಕಷ್ಟು ಬಲಿಷ್ಠವಾಗಿದೆ. ಎರಡು ಪಕ್ಷಗಳ ಕಾರ್ಯಕರ್ತರು ಪರಸ್ಪರವಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಮತದಾರರು ತಿರ್ಮಾನ ಮಾಡಿದ್ದಾರೆ ಖಂಡಿತವಾಗಿಯೂ ಡಾ. ಸಿಎನ್ ಮಂಜುನಾಥ್ ಅವರಿಗೆ ಗೆಲುವು ಸಾಧಿಸುತ್ತಾರೆ ಎಂದು ಹೇಳಿದ್ದಾರೆ.