ಡಿಕೆ ಬ್ರದರ್ಸ್ ಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ: ನಿಖಿಲ್

ಡಿಕೆ ಬ್ರದರ್ಸ್ ಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ: ನಿಖಿಲ್

ರಾಮನಗರ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಹೈ ವೋಲ್ಟೇಜ್ ಕ್ಷೇತ್ರವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯೇ ಗೆಲ್ಲುವುದು ಎಂದು ಜೆಡಿಎಸ್ ನ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಕೆ ಬ್ರದರ್ಸ್ ಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿ. ಸೋಲಿನ ಭಯದಲ್ಲಿ ಈ ಬಾರಿಯೂ ಕೂಡ ಲೋಕಸಭಾ ಚುನಾವಣೆಯಲ್ಲಿ ಸೀರೆ, ಕುಕ್ಕರು ಇನ್ನಿತರ ಗಿಫ್ಟ್ ಗಳನ್ನು ಕೊಡುತ್ತಾರೆ. ಹಾಗಾಗಿ ನಾನು ರಾತ್ರಿ 2 ಗಂಟೆಯಿಂದ 4 ಗಂಟೆಯವರೆಗೆ ಆ ಎರಡು ತಾಸು ನಿದ್ದೆ ಮಾಡುವುದಿಲ್ಲವೆಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಒಂದಷ್ಟು ಜನ ಹೋಗುವುದು, ಮತ್ತೊಂದಷ್ಟು ಜನ ಬರುತ್ತಾರೆ. ಅದಕ್ಕೆ ಪ್ರಾಮುಖ್ಯತೆ ಕೊಡುವುದ ಬೇಡ. ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಗಳು ಸಾಕಷ್ಟು ಬಲಿಷ್ಠವಾಗಿದೆ. ಎರಡು ಪಕ್ಷಗಳ ಕಾರ್ಯಕರ್ತರು ಪರಸ್ಪರವಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲದಕ್ಕಿಂತ ಮುಖ್ಯವಾಗಿ ಮತದಾರರು ತಿರ್ಮಾನ ಮಾಡಿದ್ದಾರೆ ಖಂಡಿತವಾಗಿಯೂ ಡಾ. ಸಿಎನ್​ ಮಂಜುನಾಥ್​ ಅವರಿಗೆ ಗೆಲುವು ಸಾಧಿಸುತ್ತಾರೆ  ಎಂದು ಹೇಳಿದ್ದಾರೆ.

 

Related