ಪಂಪ್ ಸೆಟ್ ಸಂಪರ್ಕ ಸಕ್ರಮಕ್ಕೆ ಸಂಪುಟ ಒಪ್ಪಿಗೆ

ಪಂಪ್ ಸೆಟ್ ಸಂಪರ್ಕ ಸಕ್ರಮಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು,ಸೆ. 23: ರಾಜ್ಯದ ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ 2015 ರಿಂದ ಈಚೆಗೆ ರೈತರು ಅಕ್ರಮವಾಗಿ ಅಳವಡಿಸಿದ್ದಂತ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳನ್ನು ಸಕ್ರಮಗೊಳಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಮೂಲಕ ಅಕ್ರಮ ಕೃಷಿ ಪಂಪ್ ಸೆಟ್ ಅಳವಡಿಸಿದ್ದಂತ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 2015ರಿಂದ ಈಚೆಗೆ ಅಕ್ರಮವಾಗಿ ಅಳವಡಿಕೆ ಮಾಡಿರುವ ಸುಮಾರು 2 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಂಪರ್ಕವನ್ನು ಸಕ್ರಮಗೊಳಿಸೋದಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ರಾಜ್ಯ ಸರ್ಕಾರದಿಂದ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸೋದಕ್ಕೆ ತಗಲುವ 6,099 ಕೋಟಿ ವೆಚ್ಚಕ್ಕೆ ಘಟನೋತ್ತರ ಅನುದಾನ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಆದರೇ ಸೆ.22ರ ಬಳಿಕ ಅಕ್ರಮವಾಗಿ ಪಡೆಯುವ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳಿಗೆ ಇದು ಅನ್ವಯಿಸೋದಿಲ್ಲ. ಈಗಾಗಲೇ ಅಕ್ರಮವಾಗಿ ಸಂಪರ್ಕ ಪಡೆದು ಸಕ್ರಮಕ್ಕಾಗಿ ಅರ್ಜಿ ಸಲ್ಲಿಸುರವವರಿಗೆ ಮಾತ್ರ ಇದು ಅನ್ವಯ ಆಗಲಿದೆ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ.

Related