ಸಿಎಂ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ

ಸಿಎಂ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಫೆಬ್ರುವರಿಯಲ್ಲಿ ನಡೆಯಲಿರುವ ಬಜೆಟ್ ಮಂಡನೆ ಬಗ್ಗೆ ಸಚಿವ ಸಂಪುಟ ನಡೆಯಲಿದೆ. ಇನ್ನು ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಇಂದು ವಿಧಾನಸೌಧದಲ್ಲಿ ನಡೆಯಲಿರುವ ಸಂಪುಟ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಹೋದ್ಯೋಗಿಗಳನ್ನು ಈ ಸಭೆಗೆ ಕರೆದಿದ್ದಾರೆ. ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಚರ್ಚೆ ಸಾಧ್ಯತೆ ಎನ್ನಲಾಗುತ್ತಿದೆ. ಅಲ್ಲದೆ ಸಂವಿಧಾನದ ಅನುಚ್ಛೇದ 341 ಕ್ಕೆ ತಿದ್ದುಪಡಿ ತರುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಕೇಂದ್ರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

Related