ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ

ಕರ್ನಾಟಕ ರಾಜ್ಯ ಪತ್ರಕರ್ತರ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಹಕಾರ ಸಂಘದ 2024ನೇ ವರ್ಷದ ಕ್ಯಾಲೆಂಡರ್ ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಕ್ಯಾಲೇಂಡರ್ ಬಿಡುಗಡೆ ಮಾಡಿದರು. ಈ ವೇಳೆ ಸಂಘದ ವತಿಯಿಂದ ರಾಜ್ಯದ ಪತ್ರಕರ್ತರಿಗೆ ವೈದ್ಯಕೀಯ ನಿಧಿಗಾಗಿ ರಾಜ್ಯ ಸರ್ಕಾರದಿಂದ 5 ಕೋಟಿ ರೂ. ಸಹಾಯಧನ ನೀಡಲು ಮನವಿ ಮಾಡಲಾಯಿತು. ಹಾಗೆಯೇ ಸಂಗಘದ ಕಚೇರಿ ಪಕ್ಕದಲ್ಲಿರುವ ರಾಜಕಾಲುವೆ ಸ್ವಚ್ಛಗೊಳಿಸಿ ಕಸ ತೆಗೆದು ಹಾಕಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಲು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಎಂ. ಪಾಳ್ಯ, ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್ ಬಿ.ಎನ್., ನಿರ್ದೇಶಕರಾದ ವಿನೋದ್ ಕುಮಾರ್  ಬಿ. ನಾಯ್ಕ, ರಮೇಶ್ ಹಿರೇಜಂಬೂರು, ಸೋಮಣ್ಣ ಕೆ.ಎಸ್., ಧ್ಯಾನ್ ಪೂಣಚ್ಚ, ಆನಂದ ಪಿ. ಬೈದನಮನೆ, ಪರಮೇಶ್ವರ್ ಕೆ.ವಿ., ವನಿತಾ ಎನ್., ನಯನಾ ಎಸ್., ಕಾರ್ಯದರ್ಶಿ ಕೆಂಪಣ್ಣ, ಸಿಬ್ಬಂದಿಗಳಾದ ವಿನುತಾ, ಹೇಮಂತ್, ಆನಂದ್ ಉಪಸ್ಥಿತರಿದ್ದರು.

Related