ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿಬಿಐ ವಶಕ್ಕೆ

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿಬಿಐ ವಶಕ್ಕೆ

ಧಾರವಾಡ : ಜಿ.ಪಂ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣ ಸಂಬಂಧ ಮಾಜಿ ಸಚಿವ ವಿನಯ ಕುಲಕರ್ಣಿ ಸಿಬಿಐ ವಶಕ್ಕೆ ಪಡೆದಿರುವುದು ರಾಜಕೀಯ ಷಡ್ಯಂತ್ರ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನಿಲಕುಮಾರ ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿನಯ್ ಕುಲಕರ್ಣಿ ಅವರು ಕೊಲೆ ಮಾಡುವ ವ್ಯಕ್ತಿಯಲ್ಲ, ಅವರು ಅಮಾಯಕರು. ಒಂದೂವರೆ ವರ್ಷದಿಂದ ಸಿಬಿಐ ತನಿಖೆ ನಡೆಯುತ್ತಿದೆ. ಇಂದು ಏನಾಗುವುದೋ ಆಗಲಿ ನೋಡೋಣ ಎಂದರು.

ಈ ಪ್ರಕರಣದಲ್ಲಿ ನಮಗೆ ಕಾನೂನು ಜಯ ಸಿಕ್ಕೇ ಸಿಗುತ್ತದೆ. ನಮ್ಮ ಪಕ್ಷದ ನಾಯಕರ ಜೊತೆ ಸೇರಿ ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಅನೀಲಕುಮಾರ್ ತಿಳಿಸಿದರು.

Related