ಮಹಾತ್ಮಾ ಗಾಂಧೀಜಿ ಭೇಟಿ ಶತಮಾನೋತ್ಸವ

ಮಹಾತ್ಮಾ ಗಾಂಧೀಜಿ ಭೇಟಿ ಶತಮಾನೋತ್ಸವ

ಗದಗ : ನಗರಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಭೇಟಿಯ ಶತಮಾನೋತ್ಸವ ಸ್ಮರಣೆ ಸಮಾರಂಭ ಗದಗ ನಗರದ ಕೆ ಎಚ್ ಪಾಟೀಲ ಸಭಾಭವನದಲ್ಲಿ ನ 11 ರಂದು ಸಂಜೆ 4 ಗಂಟೆಗೆ ನಡೆಯಲಿದೆ ಎಂದು ಕೆ ಎಚ್ ಪಾಟೀಲ ಪ್ರತಿಷ್ಠಾನದ ಅಧ್ಯಕ್ಷ ಮಾಜಿ ಶಾಸಕ ಡಿ.ಆರ್ ಪಾಟೀಲ್ ಮಂಗಳವಾರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಗದಗ ಜಿಲ್ಲೆಗೆ ಮಹಾತ್ಮಾ ಗಾಂಧೀಜಿ ಅವರು ಭೇಟಿ ನೀಡಿ ಈ ವರ್ಷ ಒಂದು ನೂರು ವರ್ಷ ಪೂರ್ಣಗೊಳ್ಳಲಿದೆ. ಈ ವರ್ಷ ಪೂರ್ತಿ ಗದಗ ಜಿಲ್ಲೆಯಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ಹಲವಾರು ಕಾರ್ಯಕ್ರಮಗಳನ್ನು ಪಕ್ಷ ಭೇದ ಮರೆತು ಆಚರಿಸಲಾಗುತ್ತಿದೆ ಎಂದು ಪಾಟೀಲ ತಿಳಿಸಿದರು.

ಗ್ರಾಮೀಣಾಭಿವೃದ್ಧಿಯಲ್ಲಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಾರ್ಯಕ್ರಮ ವನ್ನು ಉದ್ಘಾಟಿಸಲಿದ್ದಾರೆ ಎಂದು ಪಾಟೀಲ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಶಾಸಕ ಎಚ್ ಕೆ ಪಾಟೀಲ ವಹಿಸಿಕೊಳ್ಳಲಿದ್ದಾರೆಂದು ಅವರು ತಿಳಿಸಿದರು

Related