ಮಾದಪ್ಪನಿಗೆ ಶತಕುಂಭಾಭಿಷೇಕ

ಮಾದಪ್ಪನಿಗೆ ಶತಕುಂಭಾಭಿಷೇಕ

ಮಹದೇಶ್ವರ ಬೆಟ್ಟ: ಮಲೆಮಹದೇಶ್ವರ ಸ್ವಾಮಿಗೆ ಶ್ರಾವಣ ಮಾಸದ ಮೊದಲ ದಿನವಾದ ಇಂದು ವಿಶೇಷ ಶತಕುಂಭಾಭಿಷೇಕ, ಸಾಲೂರು ಮಠದ ಪೀಠಾಧ್ಯಕ್ಷ ಶಾಂತಮಲ್ಲಿಕರ‍್ಜುನ ಸ್ವಾಮೀಜಿ ನೇತೃತ್ವದಲ್ಲಿ ಕಳಶಗಳಿಗೆ ಪೂಜೆ ಸಲ್ಲಿಸಿದರು. ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ, ಸ್ಥಳೀಯರ ಉಪಸ್ಥಿತಿಯಲ್ಲಿ ಬೇಡಗಂಪಣ ಸಮುದಾಯದ ವಿಧಿವಿಧಾನಗಳ ಪ್ರಕಾರ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು.
ಈ ಬಾರಿ ಕೋವಿಡ್ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಭಕ್ತರ ಪ್ರವೇಶವನ್ನು  ಸಾಯಂಕಾಲ ಮೂರು ಗಂಟೆಯ ನಂತರ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

Related