ಬೆಂಗಳೂರು: ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಬಜೆಟ್ ವಿರುದ್ದ ಕಿಡಿಕಾರಿದ್ದಾರೆ.
ಈ ಕುರಿತು ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರಲ್ಲಿ ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ. ರಾಜ್ಯಕ್ಕೆ ಏಕೆ ಚೊಂಬು ಕೊಟ್ಟಿದ್ದೀರಿ ಎಂದು ಬಿಜೆಪಿ-ಜೆಡಿಎಸ್ ಸಂಸದರು ಮತ್ತು ಕೇಂದ್ರ ಸಚಿವರು ಪ್ರಧಾನಿ ಮೋದಿಯವರಿಗೆ ಕೇಳಿ ಎಂದು ಸಿಎಂ ಹೇಳಿದ್ದಾರೆ.
ಆಂದ್ರ-ಬಿಹಾರ ಬಿಟ್ಟು ಎಲ್ಲಾ ರಾಜ್ಯಗಳಿಗೂ ಅನ್ಯಾಯಯಾಗಿದೆ. ಜೆಡಿಎಸ್-ಬಿಜೆಪಿ ದೋಸ್ತಿಯಿದ್ದರೂ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಗುಡುಗಿದ್ದಾರೆ.
ಮನುಸ್ಮೃತಿ ವಿರೋಧಿಸಿ-ಸಂವಿಧಾನ ಪರವಾಗಿರುವ ರಾಜ್ಯಗಳ ವಿರುದ್ಧ ಬಿಜೆಪಿ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ. ಆದಾಯ ತೆರಿಗೆಯ ಮಿತಿ 12 ಲಕ್ಷ ರೂಪಾಯಿಗಳಿಗೆ ಏರಿಸಿರುವುದನ್ನು ಕೊಂಡಾಡಲಾಗುತ್ತಿದೆ. ನಮ್ಮಲ್ಲಿ ಕಳೆದ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಕೇವಲ 8.09 ಕೋಟಿ ಜನ. ಇದನ್ನೂ ಓದಿ: BJP ಸರ್ಕಾರ ನಮ್ಮನ್ನು ಸಾಲಗಾರರನ್ನಾಗಿ ಮಾಡಿದೆ: ರಾಮಲಿಂಗಾ ರೆಡ್ಡಿ
ಇದು ನಮ್ಮ ಒಟ್ಟು ಜನಸಂಖ್ಯೆಯ ಶೇಕಡಾ 6.64ರಷ್ಟಾಗತ್ತದೆ ಅವರಲ್ಲಿ 4.90 ಕೋಟಿ ಜನ ಸೊನ್ನೆ ತೆರಿಗೆ ಪಾವತಿ ದಾರರು. ಆದ್ದರಿಂದ ಆದಾಯ ತೆರಿಗೆ ಮಿತಿಯ ಹೆಚ್ಚಳ ಮೇಲು ಮಧ್ಯಮ ವರ್ಗದ ಕೆಲವೇ ಕುಟುಂಬಗಳಿಗೆ ನೆರವಾಗಬಹುದೇ ವಿನ: ದಿನದ ಆದಾಯ 100-150 ರೂಪಾಯಿಯಷ್ಟೆ ಹೊಂದಿದ ಶೇಕಡಾ 70ರಷ್ಟು ಜನಸಂಖ್ಯೆಗೆ ಇದರಿಂದ ಯಾವ ಲಾಭವೂ ಇಲ್ಲ ಎಂದಿದ್ದಾರೆ.