ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಚೈತ್ರಾ ಕುಂದಾಪುರ

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಚೈತ್ರಾ ಕುಂದಾಪುರ

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 11ರ ಕಂಟೆಸ್ಟೆಂಟ್ ಚೈತ್ರಾ ಕುಂದಾಪುರವರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ಸುಮಾರು 12 ವರ್ಷದಿಂದ ಪ್ರೀತಿಸಿದ ಹುಡುಗನನ್ನು ಕೈಹಿಡಿಯಲಿದ್ದಾರೆ.

ಹೌದು, ಕನ್ನಡ ಬಿಗ್ ಬಾಸ್ ಸೀಸನ್ 11ರಲ್ಲಿ ಗರ್ಜನೆ ಎಬ್ಬಿಸಿದ ಚೈತ್ರಾ ಕುಂದಾಪುರ ಇಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಚೈತ್ರಾ ಕುಂದಾಪುರ ಅವರು ಮದುವೆ ಆಗುತ್ತಿರುವ ಹುಡುಗ ಯಾರು ಎನ್ನುವುದು ಎಲ್ಲರಲ್ಲೂ ಕುತೂಹಲ ಮೂಡಿದೆ. ಏಕೆಂದರೆ ಬಿಗ್​ ಬಾಸ್ ಬಳಿಕ ಖ್ಯಾತಿ ಪಡೆದಿರುವ ಚೈತ್ರಾ ಕುಂದಾಪುರ ಅವರು ಎಲ್ಲರಿಗೂ ಗೊತ್ತು. ಅದರಂತೆ ಅವರು ವಿವಾಹವಾಗುತ್ತಿರುವ ಆ ಹುಡುಗ ಯಾರು ಎನ್ನುವುದು ಯಾರಿಗೂ ತಿಳಿದಿಲ್ಲ.

ಚೈತ್ರಾ ಕುಂದಾಪುರ ಅವರನ್ನು ಮದುವೆ ಆಗುತ್ತಿರುವ ಹುಡುಗನ ಹೆಸರು ಶ್ರೀಕಾಂತ್ ಕಶ್ಯಪ್. ಕಾಲೇಜು ದಿನಗಳಿಂದಲೂ ಚೈತ್ರಾ ಹಾಗೂ ಶ್ರೀಕಾಂತ್ ಕಶ್ಯಪ್‌ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಈ ನಡುವೆ ಚೈತ್ರಾ ಅವರು ಮದುವೆ ಬಗ್ಗೆ ಮಾತು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಇಬ್ಬರ ಪ್ರೀತಿಗೆ ಅಧಿಕೃತವಾಗಿ ಮುದ್ರೆ ಬೀಳುತ್ತಿದೆ. ಇದನ್ನೂ ಓದಿ: ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ: ಸುದೀಪ್

ಶ್ರೀಕಾಂತ್ ಕಶ್ಯಪ್ ಮೂಲತಃ ಉಡುಪಿ ಜಿಲ್ಲೆಯ ಹಿರಿಯಡ್ಕ ಪಟ್ಟಣದವರು. ಆನಿಮೇಷನ್ ಓದಿದ್ದರೂ ವಾಸ್ತು ಹಾಗೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಹೆಚ್ಚು ಆಸಕ್ತಿ ಇದೆ. ಚೈತ್ರಾಗೆ, ಶ್ರೀಕಾಂತ್ ಕಾಲೇಜು ದಿನಗಳಿಂದಲೇ ಪರಿಚಯ. ಇದೇ ಪರಿಚಯ ಸ್ನೇಹವಾಗಿ ಬಳಿಕ ಪ್ರೀತಿಯಾಗಿ ಮಾರ್ಪಟ್ಟು 12 ವರ್ಷಗಳ ಕಾಲ ಲವ್ ಮಾಡಿದ್ದರು. ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ಕಶ್ಯಪ್ ಅವರ ಮದುವೆ ಇಂದು ನಡೆಯಲಿದೆ.

Related