ಚಂದನ್-ನಿವಿ ವಿಚ್ಛೇದನ ಅರ್ಜಿ ಸಲ್ಲಿಸಿದ ಮೇಲೆಯೂ ಜೊತೆಗೆ ಸುದ್ದಿಗೋಷ್ಠಿ..!

ಚಂದನ್-ನಿವಿ ವಿಚ್ಛೇದನ ಅರ್ಜಿ ಸಲ್ಲಿಸಿದ ಮೇಲೆಯೂ ಜೊತೆಗೆ ಸುದ್ದಿಗೋಷ್ಠಿ..!

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಕ್ಯೂಟೆಸ್ಟ್ ಜೋಡಿ ಎಂದು ಫೇಮಸ್ ಆಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸದ್ದಿಲ್ಲದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಹೌದು, ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿಯವರು ಜೂನ್ 6ರಂದು ಬೆಂಗಳೂರಿನಲ್ಲಿರುವ ಕೋರ್ಟ್ ಗೆ ಹೋಗಿ ತಮ್ಮ ವಿಚ್ಛೇದನದ ಅರ್ಜಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಇಬ್ಬರು ಜೊತೆಯಲ್ಲೇ ಸುದ್ದಿಗೋಷ್ಠಿಯನ್ನು ಕರೆದಿದ್ದಾರೆ. ಇದರಿಂದ ಅಭಿಮಾನಿಗಳು ಫುಲ್ ಕನ್ಫ್ಯೂಸ್ ಆಗಿದ್ದಾರೆ.

ಯೆಸ್…ಕಳೆದ ಒಂದು ವರ್ಷದಿಂದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇವರಿಬ್ಬರ ಸಂಸಾರದಲ್ಲಿ ಬಿರುಕು ಬಿಟ್ಟಿದ್ದು, ಇದೀಗ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಿಕ್ಷಣ ಸಂಸ್ಥೆಯನ್ನು ಕಬಳಿಸಲು ಯತ್ನ

ಈಗ ಇಬ್ಬರೂ ಜಂಟಿಯಾಗಿ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಮೂಲಕ ಹಲವು ವದಂತಿಗೆ ಇವರು ತೆರೆ ಎಳೆಯಲಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ದಾಂಪತ್ಯಕ್ಕೆ ಈಗ 4 ವರ್ಷ. ಇವರು ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದರೆ, ಈಗ ಇವರು ಬೇರೆ ಆಗುತ್ತಿದ್ದಾರೆ. ಇದಕ್ಕೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಈ ಮಧ್ಯೆ ಇವರು ಬೇರೆ ಆಗುತ್ತಿರುವ ಬಗ್ಗೆ ಸಾಕಷ್ಟು ವದಂತಿಗಳು ಹರಿದಾಡಿದ್ದವು. ಮಗು ಪಡೆಯಲು ಒಪ್ಪದ್ದಕ್ಕೆ ನಿವೇದಿತಾ ವಿಚ್ಛೇದನ ಪಡೆದರು, ನಟಿಯಾಗಿ ಮುಂದುವರಿಯಬೇಕು ಎಂಬುದಕ್ಕೆ ಗಂಡನಿಂದ ದೂರ ಆಗುತ್ತಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿ ಬಂದವು. ಇದಕ್ಕೆಲ್ಲ ಸುದ್ದಿಗೋಷ್ಠಿಯಲ್ಲಿ ಇವರು ಸ್ಪಷ್ಟನೆ ನೀಡಲಿದ್ದಾರೆ.

ವಿಚ್ಛೇದನದ ಬಳಿಕ ಸಾಮಾನ್ಯವಾಗಿ ಒಬ್ಬರ ಮುಖ ಒಬ್ಬರು ನೋಡಿಕೊಳ್ಳೋಕೆ ಇಷ್ಟಪಡಲ್ಲ. ಅನೇಕ ಸೆಲೆಬ್ರಿಟಿಗಳು ಈ ರೀತಿ ನಡೆದುಕೊಂಡಿದ್ದಾರೆ. ಆದರೆ, ಚಂದನ್ ಹಾಗೂ ನಿವೇದಿತಾ ಈ ವಿಚಾರದಲ್ಲಿ ಭಿನ್ನ ಎನಿಸಿಕೊಳ್ಳುತ್ತಾರೆ. ವಿಚ್ಛೇದನ ಪಡೆದು ಕೋರ್ಟ್​ನಿಂದ ಹೊರ ಬರುವಾಗ ಇವರು ಕೈ ಕೈ ಹಿಡಿದುಕೊಂಡು ಬದಿದ್ದರು. ಈ ಮೂಲಕ ಇವರ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇರುವುದನ್ನು ತೋರಿಸಿಕೊಂಡಿದ್ದರು.

ಬೆಂಗಳೂರಿನ ಜಿಟಿ ಮಾಲ್​ನಲ್ಲಿರುವ ಎಂಬಿ ಲೆಗಸಿಯಲ್ಲಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಗಿದೆ. ಮಧ್ಯಾಹ್ನ 3:30ಕ್ಕೆ ಸುದ್ದಿಗೋಷ್ಠಿ ಆರಂಭ ಆಗಲಿದೆ. ಈ ವೇಳೆ ಯಾವೆಲ್ಲ ವಿಚಾರ ಮಾತನಾಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

Related