ಚಂದ್ರಬಾಬು ನಾಯ್ಡು ಬಂಧನ

ಚಂದ್ರಬಾಬು ನಾಯ್ಡು ಬಂಧನ

ತಿರುಪತಿ: ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ಕೈಗೊಂಡಿದ್ದ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.

ತಿರುಪತಿ ನಗರಕ್ಕೆ ಪ್ರವೇಶ ನಿಷೇಧಿಸಿರುವುದನ್ನು ವಿರೋಧಿಸಿ ಸಮೀಪದ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆ ಕೈಗೊಂಡಿದ್ದರು. ಬಂಧನದ ವೇಳೆ ಚಂದ್ರಬಾಬು ನಾಯ್ಡು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

‘ತಿರುಪತಿ ಮತ್ತು ಚಿತ್ತೂರು ನಗರ ಪ್ರವೇಶಿಸದಂತೆ ನನಗೆ ಏಕೆ ನಿರ್ಬಂಧ ಹೇರಿದ್ದಾರೆ ಎಂಬುದನ್ನು ತಿಳಿಸಬೇಕು‘ ಎಂದು ನಾಯ್ಡು ಒತ್ತಾಯಿಸಿದರು.

Related