ಚನ್ನಮ್ಮನ ಕಿತ್ತೂರು ಉತ್ಸವ

ಚನ್ನಮ್ಮನ ಕಿತ್ತೂರು ಉತ್ಸವ

ಬೆಂಗಳೂರು: ನಗರದ ವಿಧಾನಸೌಧದ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಚನ್ನಮ್ಮನ ಕಿತ್ತೂರು ಉತ್ಸವ 2023ರ ಅಂಗವಾಗಿ ಆಯೋಜಿಸಲಾದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ವಿನಯ್ ಕುಲಕರ್ಣಿ, ಬಾಬಾ ಸಾಹೇಬ್ ಪಾಟೀಲ್, ಮಹಾಂತೇಶ ಕೌಜಲಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ.ಕೆ. ಧರಣಿದೇವಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Related