ಖಾಸಗಿ ಶಾಲಾ ಮಕ್ಕಳು ಸರ್ಕಾರಿ ಶಾಲೆಯತ್ತ

ಖಾಸಗಿ ಶಾಲಾ ಮಕ್ಕಳು ಸರ್ಕಾರಿ ಶಾಲೆಯತ್ತ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉದ್ಘಾಟಿಸಿ ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಗಳನ್ನು ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಖಾಸಗಿ ಶಾಲಾ ಮಕ್ಕಳು ಸರ್ಕಾರಿ ಶಾಲೆಯತ್ತ ಮುಖ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದರು. ಯಾವುದೇ ಪರಸ್ಕಾರ, ಅಭಿನಂದನೆ ಬಯಸದೆ ಮಕ್ಕಳ ಜ್ಞಾನಾರ್ಜನೆಯತ್ತ ಶಿಕ್ಷಕರು ಗಮನಹರಿಸುತ್ತಿದ್ದಾರೆ ಎಂದು ಅವರ ಕಾರ್ಯವನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಸುರೇಶ್ ಕುಮಾರ್, ಶಿಕ್ಷಣ ಸುಧಾರಣಾ ಸಲಹೆಗಾರ ಹಾಗೂ ಪಿ.ಇ. ಎಸ್.ಸಂಸ್ಥೆಗಳ ಸಂಸ್ಥಾಪಕ ಎಂ.ಆರ್.ದೊರೆಸ್ವಾಮಿ ಉಪಸ್ಥಿತರಿದ್ದರು.

Related