‘ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಚೌಧರಿ ಆಯ್ಕೆಗೆ ಹರ್ಷ’

‘ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಚೌಧರಿ ಆಯ್ಕೆಗೆ ಹರ್ಷ’

ಶಹಾಪುರ :ಪ್ರತಿಷ್ಠಿತ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಶಿರವಾಳ ಸರಕಾರಿ ಪ್ರೌಢ ಶಾಲೆಯ ಹಿಂದಿ ಶಿಕ್ಷಕ ಸಾಹಿತಿ ಅಶೋಕ ಚೌಧರಿ ಭಾಜನರಾಗಿದ್ದಾರೆ ಎಂದು ಜಿಲ್ಲಾ ಹಿಂದಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಅನೀಲ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 14 ರಂದು ಕರ್ನಾಟಕ ಪ್ರೌಢ ಶಾಲಾ ಹಿಂದಿ ಶಿಕ್ಷಕರ ಸಂಘ ರಾಜ್ಯ ಘಟಕ ಬೆಂಗಳೂರು ಆಯೋಜಿಸಿದ್ದ ರಾಜ್ಯ ಮಟ್ಟದ ಹಿಂದಿ ದಿವಸ ಕಾರ್ಯಕ್ರಮದಲ್ಲಿ ರಾಜ್ಯ ಕೋಶಧ್ಯಕ್ಷ ಓಂಕಾರೆಪ್ಪ ಪ್ರಶಸ್ತಿ ಆಯ್ಕೆಯ ಘೋಷಣೆ ಮಾಡಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯಅಥಿತಿಗಳಾಗಿ ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ ಜಿ ನಮೋಶಿ, ಕಲಬುರಗಿ ವಿಭಾಗದಿಂದ ರಾಜ್ಯ ಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿಗೆ ಭಾಜನರಾದ ಅಶೋಕ ಚೌದ್ರಿಯವರು ಆಯ್ಕೆಗೆ ಜಿಲ್ಲಾ ಹಿಂದಿ ಪ್ರೌಢಶಾಲಾ ಶಿಕ್ಷಕರ ಸಂಗದ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹರ್ಷವ್ಯಕ್ತಪಡಿಸಿದರು.

Related