ಪಥ ಸಂಚಲನ ನಡೆಸಿ ಮೆಚ್ಚುಗೆಗೆ ಪಾತ್ರರಾದ ಪೌರಕಾರ್ಮಿಕರು.

ಪಥ ಸಂಚಲನ ನಡೆಸಿ ಮೆಚ್ಚುಗೆಗೆ ಪಾತ್ರರಾದ ಪೌರಕಾರ್ಮಿಕರು.

ಬೆಂಗಳೂರು, ಆ 16: ಇದೇ ಮೊದಲ ಬಾರಿಗೆ ಪೌರಕಾರ್ಮಿಕರು ಯಲಹಂಕದಲ್ಲಿ ಸ್ವಾತಂತ್ರ್ಯೋತ್ಸವದ ಪಥ ಸಂಚಲನದಲ್ಲಿ ಪಾಲ್ಗೊಂಡು ಎಲ್ಲರ ಗಮನ  ಸೆಳೆದಿದ್ದಾರೆ.

ಯಲಹಂಕದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ನೂರಾರು ಪೌರಕಾರ್ಮಿಕರು ಶಿಸ್ತು ಬದ್ಧವಾಗಿ ಪಥಸಂಚಲನ ನಡೆಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಪ್ರತಿ ದಿನ ನಗರವನ್ನು ಸ್ವಚ್ಛವಾಗಿರುವ ಕಾರ್ಯದಲ್ಲಿ ಮಗ್ನರಾಗುವ ಈ ಪೌರ ಕಾರ್ಮಿಕರು ಸ್ವಾತಂತ್ರ್ಯ ದಿನದಂದು ಸಾವಿರಾರು ನಾಗರಿಕರ ಸಮ್ಮುಖದಲ್ಲಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.

ಬಿಡಿಎ ಅಧ್ಯಕ್ಷರೂ ಆಗಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್ ವಿಶ್ವನಾಥ್ ಅವರು ಇದೇ ಮೊದಲ ಬಾರಿಗೆ ಪೌರಕಾರ್ಮಿಕರಿಗೂ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟು ಅವರಿಗೆ ಗೌರವ ದೊರೆಯುವಂತೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಶ್ವನಾಥ್ ಅವರು, ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಟ್ಟು ಅಂದವಾಗಿ ಕಾಣುವಂತೆ ಮಾಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. ಅಂತಹ ಕಾಯಕಯೋಗಿಗಳಿಗೆ ಪಥ ಸಂಚಲನದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡುವ ಮೂಲಕ ಅವರಿಗೆ ಗೌರವ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ತಮಗೆ ಈ ಗೌರವ ಸಿಕ್ಕಿದ್ದರ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪೌರಕಾರ್ಮಿಕರಾದ ಗೌರಮ್ಮ, ನಾವು ಕಸ ಗುಡಿಸಿ ರಸ್ತೆಗಳನ್ನು ಸ್ವಚ್ಛಗೊಳಿಸುತ್ತೇವೆ. ನಮಗೆ ಈ ಕೆಲಸ ಬಿಟ್ಟರೆ ಬೇರೇನೂ ಗೊತ್ತಿರಲಿಲ್ಲ. ಆದರೆ ಶಾಸಕರು ನಮಗೆ ದೊಡ್ಡ ಗ್ರೌಂಡಿನಲ್ಲಿ ಸಾವಿರಾರು ಜನರ ಎದುರು ಪಥಸಂಚಲನ ಮಾಡಲು ಮಾಡಲು ಅವಕಾಶ ಕೊಟ್ಟಿರುವುದು ಸಂತಸ ತಂದಿದೆ ಎಂದು ತಿಳಿಸಿದರು.

Related