ಸಿಎಂ ಬದಲಾವಣೆ ವಿಚಾರ ಮಾತನಾಡುವ ಹಾಗಿಲ್ಲ: ಹೈಕಮಾಂಡ್

ಸಿಎಂ ಬದಲಾವಣೆ ವಿಚಾರ ಮಾತನಾಡುವ ಹಾಗಿಲ್ಲ: ಹೈಕಮಾಂಡ್

ಬೆಂಗಳೂರು: ರಾಜ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಬಗ್ಗೆ ಇತ್ತೀಚಿಗೆ ಸತತವಾಗಿ ಚರ್ಚೆ ನಡೆಯುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಿಂದ ಇರಿಸಲಾಗುತ್ತದೆ ಎಂದು ಸುದ್ದಿಗಳು ಹರಿದಾಡುತ್ತಿವೆ.

ಆದರೆ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡಬಾರದೆಂದು ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರು ಹೇಳಿದ್ದಾರೆ.

ಅವರು ಇಂದು (ಶನಿವಾರ ನ.4) ಸಿಎಂ ಮತ್ತು ಡಿಸಿಎಂ ಅವರ ಉಪಾಹಾರ ಸಭೆಯಲ್ಲಿ ಭಾಗಿಯಾಗಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದವರು, ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ ಎಂದು ಹೇಳಿದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಚಿವರೊಂದಿಗೆ ಸಭೆ ಕರೆದಿದ್ದು, ಈ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 19 ಸಚಿವರು ಭಾಗವಹಿಸಿದ್ದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ, ಈ ಬಗ್ಗೆ ಮಾತನಾಡದಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ಸಿಎಂ ಮತ್ತು ಉಪ ಮುಖ್ಯಮಂತ್ರಿ ಬಗ್ಗೆ ಯಾವುದೇ ಗೊಂದಲವಿಲ್ಲ. ಅಭಿವೃದ್ಧಿ ಕಾಮಗಾರಿ ಬಿಟ್ಟು ಏನೂ ಮಾತನಾಡಬಾರದು ಎಂದು ಹೈಕಮಾಂಡ್ ಹೇಳಿದೆ. ಅಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕೆಲ ದಿನಗಳ ಹಿಂದೆ ಈ ಬಗ್ಗೆ ಮಾತನಾಡದಂತೆ ನಿರ್ದೇಶನ ನೀಡಿರುವುದರಿಂದ ಬಹಿರಂಗ ಹೇಳಿಕೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

 

Related