ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ

ಬೆಳಗಾವಿ : ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿ.ಎಂ  ಬಿ.ಎಸ್ ಯಡಿಯೂರಪ್ಪ  ಕೋವಿಡ್  ನಿಯಂತ್ರಣಕ್ಕೆ  ಬಂದರೆ ಮಾತ್ರ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ವೇಳೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಎಂ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸಲಾಗುವುದು ಇಲ್ಲವಾದಲ್ಲಿ  ಈ  ವರ್ಷ ಪರೀಕ್ಷೆ ನಡೆಸುವುದಿಲ್ಲ ಎಂದು ಅಭಯ ನೀಡಿದರು.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸುವುದಾಗಿ ಘೋಷಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಎಸ್‌ಎಸ್‌ಎಲ್‌ಸಿಗೆ ಎರಡು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ.

ಜುಲೈ 18 ರಿಂದ ಪರೀಕ್ಷೆ ನಡೆಸಲು ಎಸ್‌ಎಸ್‌ಎಲ್‌ಸಿ ಬೋರ್ಡ್ ಸಿದ್ಧತೆ ನಡೆಸಿದ್ದು, ಕೊರೋನಾ ಸೋಂಕು ಹೆಚ್ಚಾದಲ್ಲಿ ಪರೀಕ್ಷೆ ನಡೆಸದಿರಲು ಚಿಂತನೆ ನಡೆಸಿದೆ.

Related