ಆಸಿಡ್ ದಾಳಿ ಸಂತ್ರಸ್ತೆಗೆ ಉದ್ಯೋಗ ನೀಡಿದ ಸಿಎಂ!

 ಆಸಿಡ್ ದಾಳಿ ಸಂತ್ರಸ್ತೆಗೆ ಉದ್ಯೋಗ ನೀಡಿದ ಸಿಎಂ!

ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ತೆ, ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ CM ಸಿದ್ದರಾಮಯ್ಯ ಅವರು ಸಂತ್ರಸ್ಥೆಯ ಅಹವಾಲನ್ನು ಕೇಳಿ, ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.

2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ತೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗೆ ಮನವಿ ಮಾಡಿಕೊಂಡರು. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರೂ ಸಹ ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಸಂತ್ರಸ್ತೆ ಅಳಲು ತೋಡಿಕೊಂಡರು. ಅಹವಾಲು ಸ್ವೀಕರಿಸಿದ ಮುಖ್ಯಮಂತ್ರಿಗಳು ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

Related