ಗ್ಯಾರೆಂಟಿ ಬ್ರಮೆಯಲ್ಲಿ ಸಿಎಂ: ವಿಜಯೇಂದ್ರ

ಗ್ಯಾರೆಂಟಿ ಬ್ರಮೆಯಲ್ಲಿ ಸಿಎಂ: ವಿಜಯೇಂದ್ರ

ಚಿತ್ರದುರ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ, ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಿ, ರಾಜ್ಯದ ಜನತೆಯ ಮೇಲೆ ಲಕ್ಷಕೋಟಿ ರೂಪಾಯಿ ಸಾಲ ಹೊರೆಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರೆಂಟಿ ಭ್ರಮೆಯಲ್ಲಿ ಸಿದ್ದರಾಮಯ್ಯ ನೇತೃತ್ವ ಸರ್ಕಾರ ನಡೆಯುತ್ತಿದೆ. ಭ್ರಮೆಯಿಂದ ಹೊರಗೆ ಬರಲು ಇನ್ನೇನು ಜಾಸ್ತಿ ಕಾಲಾವಕಾಶ ಬೇಕಾಗಿಲ್ಲ. ಕೇವಲ ಲೋಕಸಭಾ ಚುನಾವಣೆಯ ಫಲಿತಾಂಶ ಸಿದ್ದರಾಮಯ್ಯ ಅವರನ್ನು ಗ್ಯಾರಂಟಿ ಭ್ರಮೆಯಿಂದ ಹೊರ ತರುತ್ತದೆ ಎಂದು ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದರೂ ಕೂಡ ಅಭಿವೃದ್ಧಿ ಕಾರ್ಯವಿಲ್ಲದೆ ಬರೀ ಶೂನ್ಯ ಸರ್ಕಾರ ಇದಾಗಿದೆ ಎಂದು ಆರೋಪಿಸಿದ್ದಾರೆ.

ಅನುದಾನ ಬಿಡುಗಡೆ ಬಗ್ಗೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಗೆ ಚುನಾವಣೆಯಲ್ಲಿಯೇ ತಕ್ಕ ಉತ್ತರ ನೀಡಿ ಅಂಕಿ ಅಂಶ ಬಿಡುಗಡೆ ಮಾಡುತ್ತೇವೆ ಎಂದರು.

 

Related