ಸದಾನಂದಗೌಡರ ಆರೋಗ್ಯ ವಿಚಾರಿಸಿದ ಸಿಎಂ

ಸದಾನಂದಗೌಡರ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು : ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಅವರು, ಅನಾರೋಗ್ಯದಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂತಹ ಅವರನ್ನು ಆಸ್ಪತ್ರೆಗೆ ಭೇಟಿ ನೀಡಿದಂತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಆರೋಗ್ಯ ವಿಚಾರಿಸಿದರು.

ಅನಾರೋಗ್ಯದಿಂದ ಬೆಂಗಳೂರಿನಲ್ಲಿ ಆಸ್ಪತ್ರೆಗೆ ಸೇರಿರುವ ಕೇಂದ್ರ  ಸಚಿವರಾದ ಡಿ.ವಿ.ಸದಾನಂದಗೌಡ ಅವರನ್ನು ಮುಖ್ಯಮಂತ್ರಿಗಳಾದ ಯಡಿಯೂರಪ್ಪ, ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಮತ್ತಿತರ ಸಚಿವರು ಭೇಟಿಯಾಗಿ ಸದಾನಂದ ಗೌಡರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

Related