ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ಇದೆ ಮೇ 7ರಂದು ನಡೆಯಲಿದ್ದು, ಭರ್ಜರಿ ಮತ ಪ್ರಚಾರ ನಡೆಯುತ್ತಿದೆ. ರಾಜ್ಯದ ಘಟಾನುಘಟಿ ನಾಯಕರುಗಳು ಅವರವರ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಗೆಲುವಿನ ಸಂದೇಶ ನೀಡಲು ಕೂಡ್ಲಿಗಿಯಲ್ಲಿ ಮತ ಪ್ರಚಾರಕ್ಕೆ ಸಮಾವೇಶವನ್ನು ಉದ್ಘಾಟಿಸಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಜಮೀರ್ ಅಹಮದ್, ರಾಮಲಿಂಗಾರೆಡ್ಡಿ ಸೇರಿ ವಿಜಯನಗರ, ಬಳ್ಳಾರಿ ಜಿಲ್ಲೆಯ ಶಾಸಕರುಗಳು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಬ್ಲಾಕ್ ಮುಖಂಡರುಗಳು ಉಪಸ್ಥಿತರಿದ್ದು ಈ.ತುಕಾರಾಂ ಅವರ ಗೆಲುವಿಗೆ ಶಪಥ ಮಾಡಿದರು.