ಸಿಎಂ, ಈಶ್ವರಪ್ಪ ಜಗಳ ಒಂದು ಹೆಜ್ಜೆ ಮುಂದೆ

ಸಿಎಂ, ಈಶ್ವರಪ್ಪ ಜಗಳ ಒಂದು ಹೆಜ್ಜೆ ಮುಂದೆ

ಕಲಬುರಗಿ : ಶಿವಮೊಗ್ಗದವರ ಜಗಳ ಅಂದರೆ ಸಿಎಂ ಬಿಎಸ್‌ವೈ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಜಗಳ ಒಂದು ಹೆಜ್ಜೆ ಮುಂದೆ ಹೋಗಿರುವುದು ಸರಿಯಲ್ಲ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಉಪ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲು ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿ, ವಿಮಾನ ನಿಲ್ದಾಣದಲ್ಲಿ ಈಶ್ವರಪ್ಪನವರು ಸಿಎಂ ವಿರುದ್ದ ಬಹಿರಂಗವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಪಕ್ಷದ ವರಿಷ್ಠರು 2 ದಿನದಲ್ಲಿ ಸರಿಪಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಏ. 17ರಂದು ಚುನಾವಣೆ ಮುಗಿದ ನಂತರ ಸಚಿವ ಸಂಪುಟದಲ್ಲಿಈ ಬಗ್ಗೆ ಚರ್ಚೆ ನಡೆದಿದೆ. ಅದರ ಬಗ್ಗೆ ಈಗ ಬಹಿರಂಗವಾಗಿ ಹೇಳಿಕೆ ಬೇಡ ಎಂದರು.
ಅವರಿಬ್ಬರೂ ಒಂದೇ ಜಿಲ್ಲೆಯವರು. ಒಂದೇ ಕಡೆ ಮಾತನಾಡಿದರೆ ಸಮಸ್ಯೆ ಬಗೆಹರಿಯುತ್ತದೆ. ನಾಲ್ಕು ಗೋಡೆಗಳ ನಡುವೆ ಯಾವ್ಯಾವ ರೀತಿ ನಡೆದು ಕೊಂಡಿದ್ದಾರೆಂಬುದು ಗೊತ್ತಿದೆ ಎಂದು ತಿಳಿಸಿದರು.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳ ಮನವೊಲಿಸಲಾಗುವುದು ಕೇಳದಿದ್ದರೆ ಚುನಾವಣೆ ಹೇಗೆ ಮಾಡುವುದು ಗೊತ್ತಿದೆ ಎಂದರು.

Related