ಸಚಿವರಿಗೆ ಸಿಎಂ ಖಡಕ್ ಸೂಚನೆ

ಸಚಿವರಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಪ್ರಗತಿಗೆ ಒತ್ತು ಕೊಟ್ಟಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿರವರುಗಳಿಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಪ್ರಗತಿ ಪರಿಶೀಲನಾ ಸಭೆ ನಡೆಸುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೂ ಪ್ರವಾಸ ಮಾಡುವ ಮೂಲಕ, ರಾಜ್ಯದಲ್ಲಿ ಕೊರೋನಾ ಭೀತಿಯ ನಡುವೆಯೂ ಅಭಿವೃದ್ಧಿ ಕಾರ್ಯಗಳತ್ತ ಅಣಿಯಾಗುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ರಾಜ್ಯದ ಎಲ್ಲಾ ಉಪ ಮುಖ್ಯಮಂತ್ರಿಗಳಿಗೆ ಸಚಿವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಚಿವರುಗಳು ಜಿಲ್ಲೆಗಳಿಗೆ ಪ್ರಗತಿ ಪರಿಶೀಲನಾ ಸಭೆ ಹಾಗು ಕಚೇರಿ ಕೆಲಸ ಕಾರ್ಯಗಳ ನಿಮಿತ್ತವಾಗಿ ಪ್ರವಾಸ ಮಾಡುವ ಸಂದರ್ಭದಲ್ಲಿ, ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರಗಳ ಶಾಸಕರುಗಳಿಗೆ, ವಿಧಾನ ಪರಿಷತ್ ಸದಸ್ಯರುಗಳಿಗೆ ಹಾಗೂ ಪಕ್ಷದ ಜಿಲ್ಲಾಧ್ಯಕ್ಷರುಗಳಿಗೆ ಪ್ರವಾಸ ಮಾಡುವ ಬಗ್ಗೆ ಕಡ್ಡಾಯವಾಗಿ ಗಮನಕ್ಕೆ ತರಬೇಕು.

ಸಚಿವರ ಆಪ್ತ ಸಿಬ್ಬಂದಿಗಳು ಶಾಸಕರುಗಳೊಂದಿಗೆ ಹಾಗೂ ಪಕ್ಷದ ಜಿಲ್ಲಾ ಕಚೇರಿಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಸಚಿವರ ಪ್ರವಾಸ ಕಾರ್ಯಕ್ರಮವನ್ನು ಎಲ್ಲರ ಅವಗಾಹನೆಗೆ ತರುವುದು. ಈ ಮೂಲಕ ಕ್ಷೇತ್ರದ ಕೆಲಸ ಕಾರ್ಯಗಳು ಹಾಗೂ ಸಾರ್ವಜನಿಕ ಕುಂದುಕೊರತೆ ಬಗ್ಗೆ ಪರಿಶೀಲಿಸಿ ಅವುಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಖಡಕ್ ಸೂಚನೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೀಡಿದ್ದಾರೆ.

Related