ಬೆಂಗಳೂರು: ಬಡವರ ಪಾಲಿನ ಭಾಗ್ಯವಿಧಾತ, ನುಡಿದಂತೆ ನಡೆಯುವ ಜನನಾಯಕ, ನಾಡು ಮೆಚ್ಚಿದ ಜನಸೇವಕ, ಐದು ಗ್ಯಾರಂಟಿಗಳನ್ನು ಕೊಡುಗೆಯಾಗಿ ನೀಡಿದ ಕರ್ನಾಟಕ ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಯಾಗಿ ಆಯ್ಕೆಗೊಂಡಿರುವಂತಹ ಸಿದ್ದರಾಮಯ್ಯ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ.
ಹೌದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು 76ನೆಯ ವರ್ಷದ ಹುಟ್ಟು ಹಬ್ಬದ ಸಂಭ್ರಮ ಈ ಸಂಭ್ರಮಕ್ಕೆ ಗಣ್ಯಾತಿಗಣ್ಯರು ಶುಭಾಶಯ ತಿಳಿಸಿದ್ದಾರೆ.
76ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯ ಅವರಿಗೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಡಿಕೆ.ಶಿವಕುಮಾರ್ ಅವರು, ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ. ರಾಜ್ಯದ ಪ್ರಗತಿಗಾಗಿ, ಕನ್ನಡಿಗರ ಆಶೋತ್ತರಗಳನ್ನು ಈಡೇರಿಸಲು ಜೊತೆಯಾಗಿ ಸಾಗೋಣ ಎಂದು ಹೇಳಿದ್ದಾರೆ.