ಚಾಮರಾಜನಗರ : ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಇಂದು ಬಿ.ಎಸ್ ಯಡಿಯೂರಪ್ಪ ಆಗಮಿಸುತ್ತಿದ್ದಾರೆ. ಜಿಲ್ಲಾ ಕೇಂದ್ರಕ್ಕೆ ಬಾರದಿದ್ದರೂ ವಿಶೇಷ ಅನುದಾನ ಘೋಷಿಸುವ ನೀರಿಕ್ಷೆಯಲ್ಲಿ ಅಲ್ಲಿನ ಜನರಿದ್ದಾರೆ.
ಇಂದು ಸಂಜೆ ಹೆಲಿಕಾಪ್ಟರ್ ಮೂಲಕ ಸಂಜೆ 4ಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ಬರಲಿರುವ ಮುಖ್ಯಮಂತ್ರಿ ಮೊದಲು ಮಹದೇಶ್ವರನ ದರ್ಶನ ಪಡೆದು ಬಳಿಕ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 123.74 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಹಲವು ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದು, ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.