ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಸಿಎಂ ಭೇಟಿ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ಇಂದು ಸಿಎಂ ಭೇಟಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿರುವುದರಿಂದ ರೈತರು ಬೆಳೆದ ಬೆಳೆ ನಾಶವಾಗಿದೆ. ಆದ್ದರಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿ ಮತ್ತು ಮಂಗಳೂರಿ ಗೆ ಭೇಟಿ ನೀಡಿದ್ದಾರೆ

ಮಳೆ ಹಿನ್ನೆಲೆ ಅನೇಕ ಕಡೆ ಹಾನಿ ಕೂಡ ಉಂಟಾಗಿದ್ದು ರೈತರು ಸಂಕಷ್ಟಕ್ಕೆ ಗುರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಮಂಗಳೂರು ಏರ್​ಪೋರ್ಟ್​ಗೆ ಆಗಮಿಸಲಿರುವ ಸಿಎಂ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಉಡುಪಿ ಡಿಸಿ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಮಧ್ಯಾಹ್ನ 3.30ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳಿ ಸಂಜೆ 4.15ಕ್ಕೆ ಮಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

 

Related