ಮಳೆಹಾನಿ ಪ್ರದೇಶಗಳಿಗೆ ಸ್ವತಃ ನಾನೇ ಬೇಟಿಯಾಗಿ ಪರಿಹಾರ ನೀಡುತ್ತೇನೆ – ಸಿಎಂ

  • In Crime
  • July 11, 2022
  • 189 Views
ಮಳೆಹಾನಿ ಪ್ರದೇಶಗಳಿಗೆ ಸ್ವತಃ ನಾನೇ ಬೇಟಿಯಾಗಿ ಪರಿಹಾರ ನೀಡುತ್ತೇನೆ – ಸಿಎಂ

ಭರ್ಜರಿ ಮಳೆ ಸುರಿಯುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಸೂಚನೆ ನೀಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಾಳೆ (ಜುಲೈ 12) ಕೊಡಗು ಮತ್ತು ಮಂಗಳೂರು ಭೇಟಿ ಕೊಡುವುದಾಗಿ ಅವರು ತಿಳಿಸಿದ್ದಾರೆ. ರಾಜ್ಯದ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, ಹೀಗಾಗಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 45 ರಿಂದ 55 ಕಿ.ಮೀ ಇರಲಿದ್ದು 65 ಕಿ.ಮೀ ವರೆಗೂ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ನಾಳೆ (ಜುಲೈ 12) ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಿ, ನಾಡಿದ್ದು (ಜುಲೈ 14) ಕಾರವಾರಕ್ಕೆ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ರಾಜ್ಯದ ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಭರ್ಜರಿ ಮಳೆ ಸುರಿಯುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.


ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Related