ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ..!

ಸಮಾಜವಾದಿ ಪಕ್ಷದ ನಾಯಕನ ಕಾರಿಗೆ ಡಿಕ್ಕಿ..!

ಮೈನ್‌ಪುರಿ: ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 500 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ನಡೆದಿದೆ. ದೇವೇಂದ್ರ ಸಿಂಗ್ ಯಾದವ್ ಈ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದು, ಭಾನುವಾರ ರಾತ್ರಿ ಅಪಘಾತದ ವೇಳೆ ಅವರು ಕಾರಿನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ಅದೃಷ್ಟವಶಾಕ್ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಎನ್ನಲಾಗಿದೆ.

ಈ ಸಂಬಂಧ ದೂರು ದಾಖಲಾಗಿದ್ದು, ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಮಣಿಪುರ ಎಸ್ಪಿ ಕಮಲೇಶ್ ದೀಕ್ಷಿತ್ ತಿಳಿಸಿದ್ದಾರೆ.  ಉತ್ತರ ಪ್ರದೇಶದ ಮೈನ್‌ಪುರಿಯ ಕರ್ಹಾಲ್ ರಸ್ತೆ ಮೂಲಕ ದೇವೇಂದ್ರ ಸಿಂಗ್ ಯಾದವ್ ಅವರು ತಮ್ಮ ನಿವಾಸಕ್ಕೆ ಹೋಗುತ್ತಿದ್ದರು. ಈ ವೇಳೆ ಮೈನ್‌ಪುರಿ ಸದರ್ ಕೊಟ್ವಾಲಿ ಪ್ರದೇಶದ ಭದಾವರ್ ಹೌಸ್ ಎದುರು ಯಾದವ್ ಕಾರಿಗೆ ಟ್ರಕ್ ಒಂದು ಢಿಕ್ಕಿ ಹೊಡೆದಿದೆ. ಮಾತ್ರವಲ್ಲದೇ ಅವರ ಕಾರನ್ನು ಸುಮಾರು 500 ಮೀಟರ್ ವರೆಗೂ ಎಳೆದೊಯ್ದಿದೆ.

ಈ ಘಟನೆಗೆ ಸಾಕ್ಷಿಯಾಗಿದ್ದ ಸ್ಥಳೀಯರು ಕಾರಿನ ಹಿಂದೆಯೇ ಓಡಿ ದೇವೇಂದ್ರ ಸಿಂಗ್ ಯಾದವ್ ಅವರನ್ನು ರಕ್ಷಿಸಿದ್ದಾರೆ. ಪ್ರಸ್ತುತ ಯಾದವ್ ಅವರು ಮೈನ್‌ಪುರಿ ಸದರ್ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related