ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ

ಡಾ ಬಿಆರ್ ಅಂಬೇಡ್ಕರ್ ಪುಣ್ಯಸ್ಮರಣೆ

ಬೆಂಗಳೂರು: ಭಾರತರತ್ನ,ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿಲಾಯಿತು.

ಇಂದು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 67 ನೇ ಪುಣ್ಯಸ್ಮರಣೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದ ಮುಂಭಾಗದಲ್ಲಿ ಬಾಬಾ ಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮುಖ್ಯಮಂತ್ರಿಯೊಂದಿಗಿರುವ ಸಮಾಜ ಕಲ್ಯಾಣ ಸೇವೆ ಸಚಿವ ಡಾ ಹೆಚ್ ಸಿ ಮಹದೆವಪ್ಪ ಮತ್ತು ಮಾಜಿ ಸಚಿವ ಹೆಚ್ ಆಂಜನೇಯ ಸಹ ಬಾಬಾ ಸಾಹೇಬರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಅದಾದ ಬಳಿಕ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಭಾಗವಹಿಸಿದ್ದರು.

 

Related