ಬೆಂಗಳೂರು: ರೈತ ನಾಯಕ, ರಾಜ್ಯ ಬಿಜೆಪಿಯ ಬುನಾದಿ, ರಾಜ್ಯ ಕಂಡ ಅಪ್ರತಿಮ ನಾಯಕರು, ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಕೇಂದ್ರಿಯ ಸಂಸದೀಯ ಮಂಡಳಿ ಹಾಗೂ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಬಿಜೆಪಿ ಪಕ್ಷದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿ ಯಶಸ್ವಿಯನ್ನು ಕಂಡ ಧೀಮಂತ ನಾಯಕನೆಂದು ಹೆಸರುವಾಸಿಯಾಗಿರುವ ಬಿ.ಎಸ್. ಯಡಿಯೂರಪ್ಪ ರವರು ಸಾಧನೆಯನ್ನು ಹೇಳತಿರದು.
ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿದ್ದಾರೆ.
ಬಿ.ಎಸ್. ಯಡಿಯೂರಪ್ಪರವರು ಕೇಂದ್ರೀಯ ಸಂಸದೀಯ ಮಂಡಳಿಯ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವುದು ನಮ್ಮೆಲ್ಲರಿಗೂ ಖುಷಿಯ ವಿಷಯ.
ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಶುಭ ಕೋರಿ ಸಿಹಿ ತಿನ್ನಿಸಿದರು.
ಇನ್ನು ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ, ಸಚಿವರಾದ ಗೋವಿಂದ ಕಾರಜೋಳ, ಕೆ. ಗೋಪಾಲಯ್ಯ, ಸಂಸದ ಲೆಹರಸಿಂಗ್, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಹೂಡಿ ವಿಜಯ್ ಕುಮಾರ್ ಬಿಜೆಪಿ ಮುಖಂಡರು ಆಲೂರು ವಿಧಾನಸಭಾ ಕ್ಷೇತ್ರ, ಮಾಜಿ ಸಚಿವ ಎಸ್. ಎನ್. ಕೃಷ್ಣಯ್ಯ ಶೆಟ್ಟಿ, ಆರ್. ಪ್ರಭಾಕರ್ ರವರು, ವೆಂಕಟೇಶ್ ಗೌಡರು ಮತ್ತು ಹರೀಶ್ ಗೌಡರು ಉಪಸ್ಥಿತರಿದ್ದರು.