ಆಸೆಪಟ್ಟರೆ ಗೋ ಮಾಂಸ ತಿನ್ನುವೆ : ಸಿದ್ದರಾಮಯ್ಯ.

ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ತಿನ್ನಬೇಕು ಅನ್ನಿಸಿದರೆ ತಿನ್ನುತ್ತೇನೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ತುಮಕೂರಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳಿಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ಅವರಿಂದ ನಾವು ಪಾಠ ಕಲಿಯಬೇಕೆ ಎಂದು ಪ್ರಶ್ನಿಸಿದರು.


ಸಂಘ ಪರಿವಾರದವರು ಧರ್ಮ, ಮನುಷ್ಯರ ನಡುವೆ ಗೋಡೆ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಮಾಜವನ್ನು ಜಾತಿ, ಧರ್ಮದ ಹೆಸರಲ್ಲಿ ಒಡೆಯುತ್ತಿದ್ದಾರೆ. ಅಂತಹವರ ಕೈಗೆ ಅಧಿಕಾರ ಕೊಟ್ಟರೆ ಸಮಾಜದಲ್ಲಿ ಮತ್ತಷ್ಟು ಒಡಕು ಮೂಡಲಿದೆ. ಆರ್‌ಎಸ್‌ಎಸ್ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತ್ರ ಹಿಂದೂನಾ? ನಾವು ಹಿಂದೂಗಳೇ. ಇತರೆ ಧರ್ಮಗಳ ಬಗ್ಗೆಯೂ ಗೌರವ ಇಟ್ಟುಕೊಂಡಿದ್ದೇವೆ ಎಂದು ಹೇಳಿದರು.

Related