ಚನ್ನಪಟ್ಟಣದ ಪ್ರಸನ್ನ ಕಾಂಗ್ರೆಸ್ ಸೇರ್ಪಡೆ..!

ಚನ್ನಪಟ್ಟಣದ ಪ್ರಸನ್ನ ಕಾಂಗ್ರೆಸ್ ಸೇರ್ಪಡೆ..!

ಚನ್ನಪಟ್ಟಣ :  ಕ್ಷೇತ್ರದ ಜನ ಕಷ್ಟಕಾಲದಲ್ಲಿ ನಮ್ಮ ಪಕ್ಷವನ್ನು ಉಳಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಮಗೆ ಚನ್ನಪಟ್ಟಣದಿಂದ ಉತ್ತಮ ಬೆಂಬಲ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಸ್ಥಳೀಯರಿಗೆ ಅವಕಾಶ ನೀಡಬೇಕು, ಜನರ ಕಷ್ಟಕ್ಕೆ ಸ್ಪಂದಿಸುವವರಿಗೆ ಆದ್ಯತೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಗುರುವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಚನ್ನಪಟ್ಟಣದ ಪ್ರಸನ್ನ ಸೇರಿದಂತೆ ಇನ್ನಿತರ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ಜನ ಬದಲಾವಣೆ ಬಯಸುತ್ತಿದ್ದು, ಅನೇಕರು ಬೇರೆ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಕಳೆದ ೨ ವರ್ಷಗಳಿಂದ ಮಾಜಿ ಶಾಸಕ ರಾಜು ಸೇರಿದಂತೆ ಅನೇಕ ನಾಯಕರನ್ನು ಸೇರಿಸಿಕೊಂಡಿದ್ದೇವೆ ಎಂದು ಅವರು ಹೇಳಿದರು.

ನಮ್ಮ ಪಕ್ಷ ಒಗ್ಗಟ್ಟು ಪ್ರದರ್ಶನ ಮಾಡುತ್ತಿದ್ದು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ತನ್ನದೇ ಆದ ಅಸ್ತಿತ್ವ ಹೊಂದಿದೆ. ಕಾರಣಾಂತರಗಳಿAದ ನಾನು ಈ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲು ಆಗಲಿಲ್ಲ. ಆದರೆ ಲೋಕಸಭಾ ಸದಸ್ಯರು ನಿಮಗೆ ಸಮಯ ಕೊಟ್ಟು, ಕಾರ್ಯಕರ್ತರಿಗೆ ಶಕ್ತಿ ತುಂಬುತ್ತಿದ್ದಾರೆ. ತಾವುಗಳು ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಉತ್ತಮ ಸಾಧನೆ ಮಾಡಿದ್ದು, ಅಭಿಯಾನದಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಅಭಿನಂದನೆಗಳು. ಇಡೀ ದೇಶದಲ್ಲಿ ಕರ್ನಾಟಕ ೭೮ ಲಕ್ಷ ಸದಸ್ಯತ್ವ ಮಾಡಿ ಹೊಸ ಇತಿಹಾಸ ನಿರ್ಮಿಸಿದೆ ಎಂದು ಅವರು ತಿಳಿಸಿದರು.

Related