ಕಾಂಗ್ರೆಸ್ ಕಾರ್ಯಕರ್ತರು ಚಡ್ಡಿ ಸುಡುವ ಮೂಲಕ ಪ್ರತಿಭಟನೆ..!

ಕಾಂಗ್ರೆಸ್ ಕಾರ್ಯಕರ್ತರು ಚಡ್ಡಿ ಸುಡುವ ಮೂಲಕ ಪ್ರತಿಭಟನೆ..!

ಚಿಕ್ಕಮಗಳೂರು (ಜೂ.07) : ಪಠ್ಯ ಪುಸ್ತಕರ ಪರಿಷ್ಕರಣೆ ಸಮಿತಿ ರಚಿಸುವಂತೆ  ಒತ್ತಾಯಿಸಿ ನಡೆದ ಚಳವಳಿ ಸಂದರ್ಭದಲ್ಲಿ ಎನ್ಎಸ್ಯುಐ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ಹೊರಹಾಕಿದರು.

ವಿವಾದದ ನಡುವೆಯೂ ಚಡ್ಡಿ ಸುಡುವ ಪ್ರತಿಭಟನೆ: ರಾಜ್ಯದಲ್ಲಿ ಯುವ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟನೆ ವೇಳೆಯಲ್ಲಿ ಚಡ್ಡಿ ಸುಡುವ ಮೂಲಕ ವಿವಾದ ಕಿಡಿಯನ್ನು ಹೊತ್ತಿಸಿದ್ದರು. ಇದರ ಬೆನ್ನಲ್ಲೇ ಚಿಕ್ಕಮಗಳೂರಿನಲ್ಲೂ ಎನ್ಎಸ್ಯುಐ ಮುಖಂಡರ ಬಂಧನ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯಕರ್ತರು ಚಡ್ಡಿ ಸುಡುವ ಮೂಲಕ ಪ್ರತಿಭಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಂಗ್ರೆಸ್ನ ಮುಖಂಡರು ಹಾಗೂ ಪದಾಧಿಕಾರಿಗಳು ಬಿಜೆಪಿಗೆ ದಿಕ್ಕಾರ,ಆರ್ ಎಸ್ ಎಸ್ ಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಾ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.

Related