ಕೇಂದ್ರ ಸರ್ಕಾರದ ಲೂಟಿಗೆ ಕೈ ಆಕ್ರೋಶ

ಕೇಂದ್ರ ಸರ್ಕಾರದ ಲೂಟಿಗೆ ಕೈ ಆಕ್ರೋಶ

ಬಂಗಾರಪೇಟೆ : ಕೇಂದ್ರ ಸರಕಾರ ನಿರಂತರವಾಗಿ ಪೆಟ್ರೋಲ್ ಮತ್ತ ಡೀಸಲ್ ಬೆಲೆ ಹೆಚ್ಚಳ ಮಾಡುತ್ತಿರವ ವಿರುದ್ದ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಶಾಸಕ ಎಸ್ ಎನ್. ನಾರಾಯಣಸ್ವಾಮಿ ಮಾತನಾಡಿ ಕೊರೋನ ಸಂಕಷ್ಟದ ಸಮಯದಲ್ಲಿ ರಾಜ್ಯದ ಬಹುತೇಕ ಜನ ಉದ್ಯೋಗ ಕಳೆದುಕೊಂಡು ಕೂಲಿ ಕಾರ್ಮಿಕರು ಕೂಲಿ ಸಿಗದೆ ಪರದಾಡುವ ಇಂತಹ ಸಮಯದಲ್ಲಿ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಎರಿಕೆ ಮಾಡುತ್ತಿರುವುದು ಸರಿಯಲ್ಲ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇದ್ದರೂ ಕೇಂದ್ರ ಸರಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಎರಿಕೆ ಮಾಡುವುದು ದೇಶದ ಜನರ ಹಣ ಲೂಟಿ ಮಾಡುವಂತಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯಿಂದ ಎಲ್ಲಾ ಅಗತ್ಯ ವಸ್ತುಗಳಾದ ದಿನಸಿ ಪದಾರ್ಥಗಳು, ತರಕಾರಿ, ಕಟ್ಟಡ ನಿರ್ಮಾಣ ವಸ್ತುಗಳ ಬೆಲೆ, ಏರಿಕೆಯಾಗಿ ಜನಸಾಮಾನ್ಯರು ಕೊಂಡುಕೊಳ್ಳುವ ಸಾಮರ್ಥ್ಯ  ಕಳೆದು ಕೊಳ್ಳುವಂತಾಗಲಿದೆ ಎಂದು ಅಸಮದಾನ ವ್ಯಕ್ತಪಡಿಸಿದರು.

Related