ಸಿಎಂ ಆಶೀರ್ವಾದ ಪಡೆದರು ಕಾಂಗ್ರೆಸ್ ಅಭ್ಯರ್ಥಿಗಳು

ಸಿಎಂ ಆಶೀರ್ವಾದ ಪಡೆದರು ಕಾಂಗ್ರೆಸ್ ಅಭ್ಯರ್ಥಿಗಳು

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯವರಿಗೆ ಟಿಕೆಟ್ ಸಿಕ್ಕಿದ್ದು ಮತ್ತು ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೌತಮ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಇಬ್ಬರಿಗು ಜನರ ಮಧ್ಯೆ ನಿಂತು ಕೆಲಸ ಮಾಡಬೇಕೆಂದು ಹೇಳಿದರು.

ಇಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಷ ಅಭ್ಯರ್ಥಿ ಗೌತಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳು ಇಬ್ಬರಿಗೂ ಶುಭ ಹಾರೈಸಿದರು.

ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಜನರ ಅಭಿಪ್ರಾಯ, ಒಲವು ಕಾಂಗ್ರೆಸ್ ಪರವಾಗಿದೆ. ಜನರ ನಡುವೆ ನಿಂತು ಕೆಲಸ ಮಾಡಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

Related