ಕಾಂಗ್ರೆಸ್ ಅಭ್ಯರ್ಥಿಯ ಪತ್ನಿಯ ಕಾರಿನ ಮೇಲೆ ಕಲ್ಲು ತೂರಾಟ

ಕಾಂಗ್ರೆಸ್ ಅಭ್ಯರ್ಥಿಯ ಪತ್ನಿಯ ಕಾರಿನ ಮೇಲೆ ಕಲ್ಲು ತೂರಾಟ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಪ್ರಚಾರ ಭರ್ಜರಿ ನಡೆಯುತ್ತಿದ್ದು ಹೊಸಕೋಟಿ ನಗರದಲ್ಲಿ ಶಾಸಕ ಶರತ್ ಬಚ್ಚೇಗೌಡ ಅವರ ಪತ್ನಿಯ ಕಾರಿನ ಗಾಜು ಒಡೆದು ಬ್ಯಾಗ್ ಹಾಗೂ ಮೊಬೈಲ್ ದೋಚಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಹೌದು, ಇಂದು ಚುನಾವಣಾ ಪ್ರಚಾರಕ್ಕಾಗಿ ಶಾಸಕ ಶರತ್ ಬಚ್ಚೇಗೌಡ ಅವರ ಪತ್ನಿ ಕಾರ್ಯಕರ್ತೆಯರೊಂದಿಗೆ ತೆರಳಿದ್ದಾಗ ರಸ್ತೆ ಬದಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಬ್ಯಾಗ್ ಹಾಗೂ ಮೊಬೈಲ್ ದೋಚಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related